Publish Date: Sat, 08 Aug 2026 (09:48 IST)
Updated Date: Sat, 08 Aug 2026 (09:51 IST)
Photo Credit: Social media
ಬೆಂಗಳೂರು: ಒಂದೇ ಒಂದು ಮಾತಿನಿಂದ ಮುನಿಸಿಕೊಂಡಿದ್ದ ಹಿರಿಯ ಶಾಸಕ ಟಿಬಿ ಜಯಚಂದ್ರ ಮನಸ್ಸು ಬದಲಾಯಿಸುವಲ್ಲಿ ಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಸಚಿವ ಸ್ಥಾನ ಸಿಗಲಿಲ್ಲ ಎಂದು ಹಲವು ಶಾಸಕರು ಅಸಮಾಧಾನಗೊಂಡಿದ್ದರು. ಕೆಲವರು ರಾಜೀನಾಮೆಗೆ ಮುಂದಾಗಿದ್ದರು. ಖುದ್ದಾಗಿ ಎಲ್ಲಾ ಶಾಸಕರ ಮನೆಗೆ ಭೇಟಿ ನೀಡಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸಂಧಾನ ನಡೆಸಿದ್ದರು.
ಇದರ ನಡುವೆ ಹಿರಿಯ ಶಾಸಕ ಟಿಬಿ ಜಯಚಂದ್ರ ಬಹಿರಂಗವಾಗಿಯೇ ತಮ್ಮ ಆಕ್ರೋಶ ಹೊರಹಾಕಿದ್ದರು. ನಾನು ಕಾಂಗ್ರೆಸ್ಸಿಗನೇ ಅಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದರು. ತಾರಕಕ್ಕೇರಿದ ಅವರ ಮುನಿಸನ್ನು ಸಿಎಂ ಡಿಕೆ ಶಿವಕುಮಾರ್ ಒಂದೇ ಭೇಟಿಯಿಂದ ಮರೆಸಿದ್ದಾರೆ.
ನಿನ್ನೆ ರಾತ್ರಿ ಟಿಬಿ ಜಯಚಂದ್ರ ಮನೆಗೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್ ಸ್ಪೀಕರ್ ಆಗುವಂತೆ ಮನವೊಲಿಸಿದ್ದಾರೆ. ಇದನ್ನು ಅವರು ಒಪ್ಪಿಕೊಂಡಿದ್ದಾರೆ. ಸದ್ಯಕ್ಕೆ ನಾನು ಸ್ಪೀಕರ್ ಆಗಿ ಕೆಲಸ ಮಾಡಲಿದ್ದೇನೆ. ನನ್ನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಎಂದು ಟಿಬಿ ಜಯಚಂದ್ರ ಹೇಳಿದ್ದಾರೆ. ಹೀಗಾಗಿ ಸದ್ಯಕ್ಕೆ ಇವರ ಮುನಿಸು ಮರೆಯಾದಂತೆ ತೋರುತ್ತಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ