Select Your Language

Notifications

webdunia
webdunia
webdunia
webdunia

ಗರಿಗೆದರಿದ ಕುತೂಹಲ: ರಹಸ್ಯ ಸ್ಥಳಕ್ಕೆ ತೆರಳಿದ ಸಿಎಂ, ಜಿ.ಪರಮೇಶ್ವರ್

ಗರಿಗೆದರಿದ ಕುತೂಹಲ: ರಹಸ್ಯ ಸ್ಥಳಕ್ಕೆ ತೆರಳಿದ ಸಿಎಂ, ಜಿ.ಪರಮೇಶ್ವರ್
ಬೆಂಗಳೂರು , ಭಾನುವಾರ, 18 ಜೂನ್ 2017 (12:42 IST)
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಬೀಳ್ಕೊಟ್ಟ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ.
ಭದ್ರತಾ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಅವರೊಂದಿಗೆ ರಹಸ್ಯ ಸ್ಥಳಕ್ಕೆ ತೆರಳಿದರು. ತಿಂಡಿ ತಿನ್ನುವ ನೆಪದಲ್ಲಿ ಉಭಯ ನಾಯಕರು ಚರ್ಚೆ ನಡೆಸಲು ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸಭೆ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿರುವುದರಿಂದ, ಸಚಿವ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ  ಬಗ್ಗೆ ಚರ್ಚೆ ನಡೆದಿರಬಹುದು ಎಂದು ಕೆಲ ಅನಾಮಧೇಯರಾಗಿರಲು ಬಯಸಿರುವ ನಾಯಕರು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮೂರು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಉದ್ದೇಶ ಹೊಂದಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಕೆಲವರು ದೆಹಲಿಗೆ ತೆರಳಿದ್ದರೆ, ಕೆಲವರು ದೆಹಲಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರುತ್ತಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ