Select Your Language

Notifications

webdunia
webdunia
webdunia
webdunia

ಮಾಧ್ಯಮಗಳ ಸಿಎಂ ಗರಂ: ಮಜಾ ಮಾಡಿ ಎಂದ ಕುಮಾರಸ್ವಾಮಿ

ಮಾಧ್ಯಮಗಳ ಸಿಎಂ ಗರಂ: ಮಜಾ ಮಾಡಿ ಎಂದ ಕುಮಾರಸ್ವಾಮಿ
ಬೆಂಗಳೂರು , ಭಾನುವಾರ, 28 ಏಪ್ರಿಲ್ 2019 (17:51 IST)
ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ. ಹೀಗಂತ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಭೆ ಮುಗಿಸಿ ತೆರಳಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ. ಸಭೆ ನಂತರ ಪ್ರತಿಕ್ರಿಯೆಗೆ ಸಿಎಂ ಕುಮಾರಸ್ವಾಮಿ ನಿರಾಕರಿಸಿದರು.

ಮಾಧ್ಯಮಗಳ ಮೇಲೆ ಮತ್ತೆ ಗರಂ ಆದ ಸಿಎಂ ಕುಮಾರಸ್ವಾಮಿ, ನಿಮ್ಮಲ್ಲಿನ ಚರ್ಚೆ, ಸುದ್ದಿಗಳಿಂದ ನಾನು ನಿಮಗೆ ಬಹಿಷ್ಕಾರ ಹಾಕಿದ್ದೇನೆ. ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ. (ಐ ಆಮ್ ಬಾಯ್ಕಟಿಂಗ್ ಯುವರ್ ಸೆಲ್ಫ್ ) ಎಂದು ತೆರಳಿದರು.
ಅದೇನು ಸ್ಟೋರಿನೋ, ಅದೇನು ಚರ್ಚೆ ಮಾಡ್ತೀರೋ ಮಾಡಿಕೊಳ್ಳಿ. ನಾನು ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ ಎಂದರು.

ಏನೇನು ಚರ್ಚೆ ಮಾಡ್ತಿರೋ , ಮಾಡ್ಕೊಳ್ಳಿ ಮಜಾ ಮಾಡಿ ಎಂದು ಹೇಳಿ ಹೊರಟರು ಸಿಎಂ ಕುಮಾರಸ್ವಾಮಿ.



Share this Story:

Follow Webdunia kannada

ಮುಂದಿನ ಸುದ್ದಿ

ಬಟ್ಟೆಗೆ ಹಾಕುವ ಪಿನ್ ನುಂಗಿದ ಬಾಲಕಿ ಸಾವು