Webdunia - Bharat's app for daily news and videos

Install App

ಸ್ವಾಗತ ಭಾಷಣಕ್ಕೆ ಸಿಎಂ ಗರಂ,ಸಮಯಕ್ಕೆ ಮಹತ್ವ ಕೊಡಿ: ಬೊಮ್ಮಾಯಿ

Webdunia
ಬುಧವಾರ, 15 ಸೆಪ್ಟಂಬರ್ 2021 (12:12 IST)
ಬೆಂಗಳೂರು : ಸರ್ ಎಂ. ವಿಶ್ವೇಶ್ವರಯ್ಯ 161ನೇ ಜಯಂತಿ ಕಾರ್ಯಕ್ರಮದ ವೇಳೆ ಸ್ವಾಗತ ಭಾಷಣ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆದ ಘಟನೆ ನಡೆದಿದೆ.

ಸರ್ ಎಂ. ವಿಶ್ವೇಶ್ವರಯ್ಯ 161ನೇ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ತಕ್ಷಣ ಮುಗಿಸದೇ 10 ನಿಮಿಷಗಳ ಕಾಲ ಅನಗತ್ಯ ಮಾತನಾಡುತ್ತಿರುವುದನ್ನು ಕಂಡು ಗರಂ ಆದ ಸಿಎಂ ಬೊಮ್ಮಾಯಿ ಕಾರ್ಯಕ್ರಮದ ಆಯೋಜಕರಿಗೆ ಭಾಷಣದ ಆರಂಭದಲ್ಲೇ ಸಮಯಕ್ಕೆ ಮಹತ್ವವನ್ನು ಕೊಡಬೇಕು ಎಂದು ಹೇಳುವ ಮೂಲಕ ಚಾಟಿ ಬೀಸಿದ್ದಾರೆ.
ಸರ್ ಎಂ. ವಿಶ್ವೇಶ್ವರಯ್ಯನವರು ಸಮಯಕ್ಕೆ ಪ್ರಾಶಸ್ತ್ಯ ನೀಡುತ್ತಿದ್ದರು. ಹಾಗೆಯೇ ನಾವು ಕೂಡ ಸಮಯಕ್ಕೆ ಮಹತ್ವ ಕೊಡುವುದನ್ನು ಕಲಿಯಬೇಕು. ಕೆಲ ದೇಶಗಳಲ್ಲಿ ಇಡೀ ಕಾರ್ಯಕ್ರಮ ಮುಕ್ಕಾಲು ಗಂಟೆಗಳಲ್ಲಿ ಮುಗಿಯುತ್ತೆ. ಆದರೆ ನಮ್ಮಲ್ಲಿ ಇದ್ದವರು ಇಲ್ಲದವರನ್ನು ಸ್ವಾಗತ ಮಾಡುತ್ತಾ ಇರುತ್ತಾರೆ. ಇದು ಸ್ವಲ್ಪ ಬದಲಾವಣೆಯಾಗಬೇಕು ಅನಿಸುತ್ತದೆ ಎಂದರು.
ಇದೇ ವೇಳೆ ಸರ್ ಎಂ ವಿಶ್ವೇಶ್ವರಯ್ಯನವರು ಶ್ರಮಜೀವಿಗಳು. ಸಮಯಕ್ಕೆ ಮಹತ್ವ ನೀಡುತ್ತಿದ್ದರು. 161 ವರ್ಷಗಳಾದರೂ ಅವರ ಸಾಧನೆ ನೆನಪಿಸಿಕೊಳ್ಳುತ್ತೇವೆ. ಈ ರಾಜ್ಯಕ್ಕೆ ಮತ್ತೊಮ್ಮೆ ಸರ್ ಎಂ ವಿಶ್ವೇಶ್ವರಯ್ಯನವರು ಬೇಕಾಗಿದ್ದಾರೆ. ನಮ್ಮ ಸ್ವಂತ ಮನೆ ಕಟ್ಟುವಾಗ ಗುಣಮಟ್ಟ ನೋಡುತ್ತೇವೆ. ಅದೇ ಗುಣಮಟ್ಟ ಸರ್ಕಾರಿ ಕೆಲಸದಲ್ಲಿಯೂ ಕಾಯ್ದುಕೊಳ್ಳಬೇಕು ಎಂದು ಬೊಮ್ಮಾಯಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments