Webdunia - Bharat's app for daily news and videos

Install App

ಸ್ವಾಗತ ಭಾಷಣಕ್ಕೆ ಸಿಎಂ ಗರಂ,ಸಮಯಕ್ಕೆ ಮಹತ್ವ ಕೊಡಿ: ಬೊಮ್ಮಾಯಿ

Webdunia
ಬುಧವಾರ, 15 ಸೆಪ್ಟಂಬರ್ 2021 (12:12 IST)
ಬೆಂಗಳೂರು : ಸರ್ ಎಂ. ವಿಶ್ವೇಶ್ವರಯ್ಯ 161ನೇ ಜಯಂತಿ ಕಾರ್ಯಕ್ರಮದ ವೇಳೆ ಸ್ವಾಗತ ಭಾಷಣ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆದ ಘಟನೆ ನಡೆದಿದೆ.

ಸರ್ ಎಂ. ವಿಶ್ವೇಶ್ವರಯ್ಯ 161ನೇ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ತಕ್ಷಣ ಮುಗಿಸದೇ 10 ನಿಮಿಷಗಳ ಕಾಲ ಅನಗತ್ಯ ಮಾತನಾಡುತ್ತಿರುವುದನ್ನು ಕಂಡು ಗರಂ ಆದ ಸಿಎಂ ಬೊಮ್ಮಾಯಿ ಕಾರ್ಯಕ್ರಮದ ಆಯೋಜಕರಿಗೆ ಭಾಷಣದ ಆರಂಭದಲ್ಲೇ ಸಮಯಕ್ಕೆ ಮಹತ್ವವನ್ನು ಕೊಡಬೇಕು ಎಂದು ಹೇಳುವ ಮೂಲಕ ಚಾಟಿ ಬೀಸಿದ್ದಾರೆ.
ಸರ್ ಎಂ. ವಿಶ್ವೇಶ್ವರಯ್ಯನವರು ಸಮಯಕ್ಕೆ ಪ್ರಾಶಸ್ತ್ಯ ನೀಡುತ್ತಿದ್ದರು. ಹಾಗೆಯೇ ನಾವು ಕೂಡ ಸಮಯಕ್ಕೆ ಮಹತ್ವ ಕೊಡುವುದನ್ನು ಕಲಿಯಬೇಕು. ಕೆಲ ದೇಶಗಳಲ್ಲಿ ಇಡೀ ಕಾರ್ಯಕ್ರಮ ಮುಕ್ಕಾಲು ಗಂಟೆಗಳಲ್ಲಿ ಮುಗಿಯುತ್ತೆ. ಆದರೆ ನಮ್ಮಲ್ಲಿ ಇದ್ದವರು ಇಲ್ಲದವರನ್ನು ಸ್ವಾಗತ ಮಾಡುತ್ತಾ ಇರುತ್ತಾರೆ. ಇದು ಸ್ವಲ್ಪ ಬದಲಾವಣೆಯಾಗಬೇಕು ಅನಿಸುತ್ತದೆ ಎಂದರು.
ಇದೇ ವೇಳೆ ಸರ್ ಎಂ ವಿಶ್ವೇಶ್ವರಯ್ಯನವರು ಶ್ರಮಜೀವಿಗಳು. ಸಮಯಕ್ಕೆ ಮಹತ್ವ ನೀಡುತ್ತಿದ್ದರು. 161 ವರ್ಷಗಳಾದರೂ ಅವರ ಸಾಧನೆ ನೆನಪಿಸಿಕೊಳ್ಳುತ್ತೇವೆ. ಈ ರಾಜ್ಯಕ್ಕೆ ಮತ್ತೊಮ್ಮೆ ಸರ್ ಎಂ ವಿಶ್ವೇಶ್ವರಯ್ಯನವರು ಬೇಕಾಗಿದ್ದಾರೆ. ನಮ್ಮ ಸ್ವಂತ ಮನೆ ಕಟ್ಟುವಾಗ ಗುಣಮಟ್ಟ ನೋಡುತ್ತೇವೆ. ಅದೇ ಗುಣಮಟ್ಟ ಸರ್ಕಾರಿ ಕೆಲಸದಲ್ಲಿಯೂ ಕಾಯ್ದುಕೊಳ್ಳಬೇಕು ಎಂದು ಬೊಮ್ಮಾಯಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments