‘ಪುಂಡರ ಕೈಗೆ ಸಿಎಂ ಅಧಿಕಾರ ಕೊಟ್ಟಿದ್ದಾರೆ’

Webdunia
ಭಾನುವಾರ, 10 ಏಪ್ರಿಲ್ 2022 (19:24 IST)
ಸಿಎಂ ಬೊಮ್ಮಾಯಿ ಅವರಿಗೆ ತಮ್ಮ ಸಂಪುಟ ಮತ್ತು ಪಕ್ಷದ ಮೇಲೆ ನಿಯಂತ್ರಣವಿಲ್ಲ. ಸರ್ಕಾರವನ್ನೇ ಸಂಘ ಪರಿವಾರಕ್ಕೆ ಅಡವಿಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ʼಬೊಮ್ಮಾಯಿ ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರವನ್ನು ಸಂಘ ಪರಿವಾರಕ್ಕೆ ಹೊರ ಗುತ್ತಿಗೆಗೆ ನೀಡಿದ್ದಾರೆ. ಅಲ್ಲಿರುವ ಕೆಲವು ಪುಂಡರ ಕೈಗೆ ಅಧಿಕಾರ ನೀಡಿರುವಂತೆ ಕಾಣುತ್ತಿದೆ. ಸರ್ಕಾರವನ್ನು ಸಂಘ ಪರಿವಾರಕ್ಕೆ ಅಡವಿಟ್ಟರೆ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಬೊಮ್ಮಾಯಿ ಕನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಇನ್ನೂ ಅಧಿಕಾರದಲ್ಲಿದ್ದರೆ, ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌರ್ಜನ್ಯ ಎಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು. ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments