Webdunia - Bharat's app for daily news and videos

Install App

ಸಿಎಂ ಗ್ರಾಮವಾಸ್ತವ್ಯ ದಿಢೀರ್ ರದ್ದು; ಕಾರಣ ಏನು?

Webdunia
ಶನಿವಾರ, 22 ಜೂನ್ 2019 (14:39 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮತ್ತೊಂದು ವಿಘ್ನ ಎದುರಾಗಿದೆ. ಹೀಗಾಗಿ ದಿಢೀರ್ ಆಗಿ ಗ್ರಾಮ ವಾಸ್ತವ್ಯ ರದ್ದುಗೊಂಡಿದೆ.

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸಿಎಂ ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯಕ್ಕೆ ಮತ್ತೊಂದು ವಿಘ್ನ ಎದುರಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಮೊದಲ ಗ್ರಾಮ ವಾಸ್ತವ್ಯ ನಡೆಯಿತು. ಆದರೆ ಕಲಬುರಗಿ ಜಿಲ್ಲೆಯ ಹೇರೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ರದ್ದುಗೊಂಡಿದೆ.

ಭಾರೀ ಮಳೆಯಿಂದಾಗಿ ಗ್ರಾಮ ವಾಸ್ತವ್ಯವನ್ನು ಮುಂದೂಡಲಾಗಿದೆ. ಬೃಹತ್ ವೇದಿಕೆ, ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಂಡಿದ್ದರು. ಆದರೂ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ವೇದಿಕೆಗೆ ಹಾನಿಯಾಗಿದೆ.

ಅಷ್ಟೇ ಅಲ್ಲ, ವೇದಿಕೆವರೆಗೂ ಮಳೆ ನೀರು ನಿಂತುಕೊಂಡಿದೆ. ವೇದಿಕೆವರೆಗೆ ನೀರನಲ್ಲಿ ಹಾಯ್ದು ಹೋಗಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಳೆ ಕಾರಣದಿಂದ ಮನವಿ ಸಲ್ಲಿಸಲು ಬರುವ ಜನರ ಸಂಖ್ಯೆಯಲ್ಲಿಯೂ ಇಳಿಮುಖ ವಾಗುವ ಸಾಧ್ಯತೆ ಕಂಡುಬಂದಿತು.

ಇದನ್ನೆಲ್ಲ ಗಮನಿಸಿ ಹೇರೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಿಎಂ ಗ್ರಾಮ ವಾಸ್ತವ್ಯವನ್ನು ರದ್ದು ಪಡಿಸಿದ್ದು, ಮುಂದಿನ ದಿನಾಂಕ ಆ ಬಳಿಕ ತಿಳಿಸಲಾಗುವುದೆಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments