Webdunia - Bharat's app for daily news and videos

Install App

ಸಿಎಂ ಗ್ರಾಮವಾಸ್ತವ್ಯ ಎಫೆಕ್ಟ್; ಮುಖ್ಯಗುರುಗಳ ಮೇಲೆ ಸಿಟ್ಟಾದ ಆಯುಕ್ತರು

Webdunia
ಶನಿವಾರ, 29 ಜೂನ್ 2019 (18:56 IST)
ಸಿಎಂ ಗ್ರಾಮ ವಾಸ್ತವ್ಯ ನಡೆಸಿದ ಬೆನ್ನೆಲ್ಲೆ ಕರೆದಿದ್ದ ಸಭೆಯಲ್ಲಿ ಮುಖ್ಯಗುರುಗಳು ಸರಿಯಾದ ಮಾಹಿತಿಯೊಂದಿಗೆ ಆಗಮಿಸದ ಕಾರಣ ಅವರ ಮೇಲೆ ವಿಭಾಗದ ಪ್ರಾದೇಶಿಕ ಆಯುಕ್ತರು ಗರಂ ಆಗಿರುವ ಘಟನೆ ನಡೆದಿದೆ.

ಹೈದ್ರಾಬಾದ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಆರು ಜಿಲ್ಲೆಯ ಶಾಲೆಗಳಲ್ಲಿರುವ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಶಾಲೆಗಳ ಬಲವರ್ಧನೆಗೆ ಕಲ್ಪಿಸಬೇಕಾದ ಮೂಲಭೂತ ಸೌಲಭ್ಯಗಳ ಕುರಿತು ಬರುವ ಜುಲೈ 3ರ ಒಳಗೆ ವರದಿ ನೀಡುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೈದ್ರಾಬಾದ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 27 ರಂದು ಕಲಬುರಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಭಾಗದಲ್ಲಿನ ಶಾಲೆಗಳ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ ಸೇರಿದಂತೆ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ  ಕರೆದಿದ್ದ ಆರು ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಜೊತೆ ಚರ್ಚಿಸಿ ಅವರು ಮಾತನಾಡಿದ್ರು.

ಜುಲೈ 3ರ ಒಳಗೆ ಎಲ್ಲಾ ಡಿಡಿಪಿಐಗಳು ವರದಿ ನೀಡಬೇಕು.  ಜುಲೈ 4 ಅಥವಾ  5 ರಂದು ಮತ್ತೊಮ್ಮೆ ಪರಾಮರ್ಶಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದರು. 

ಶಾಲಾ ಕಟ್ಟಡ, ಶೌಚಾಲಯ, ಕುಡಿಯುವ ನೀರು, ದುರಸ್ತಿ, ವಿದ್ಯುತ್, ಕಂಪೌಂಡ್ ಮುಂತಾದವುಗಳ ಬಗ್ಗೆ ಮಾಹಿತಿ ನೀಡಬೇಕು. ಜಮೀನಿನ ವಿವಾದ ಇಲ್ಲದ ಕಡೆ ಮಾತ್ರ ಕಂಪೌಂಡ್ ನಿರ್ಮಿಸುವ ಬಗ್ಗೆ ಮಾಹಿತಿ ಸಲ್ಲಿಸಬೇಕು ಎಂದು ಅವರು ಸೂಚಿಸಿದರು.

ಅನುದಾನದ ಬಗ್ಗೆ ಮಾಹಿತಿ ಇಲ್ಲ:  ಶಾಲೆಗಳ ನಿರ್ವಹಣೆಗೆ ಸಾಕಷ್ಟು ಅನುದಾನ ಸರ್ಕಾರದಿಂದ ನೀಡಲಾಗುತ್ತದೆ. ಆದರೆ, ಮೂಲಭೂತ ಸೌಕರ್ಯಗಳ ನಿರ್ವಹಣೆಗಾಗಿ ನೀಡುವ ಅನುದಾನದ ಬಗ್ಗೆ ಮುಖ್ಯೋಪಾಧ್ಯಾಯರಿಗೆ ಸರಿಯಾದ ಮಾಹಿತಿಯೇ ಇಲ್ಲ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೈದ್ರಾಬಾದ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ ಸಿಟ್ಟಾದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments