Select Your Language

Notifications

webdunia
webdunia
webdunia
webdunia

ಸಿಎಂ ಹಾಜರ್: ಕಲ್ಯಾಣ ಕರ್ನಾಟಕ ಉತ್ಸವ ಸೆ. 17ಕ್ಕೆ

ಸಿಎಂ ಹಾಜರ್: ಕಲ್ಯಾಣ ಕರ್ನಾಟಕ ಉತ್ಸವ ಸೆ. 17ಕ್ಕೆ
ಕಲಬುರಗಿ , ಭಾನುವಾರ, 15 ಸೆಪ್ಟಂಬರ್ 2019 (18:24 IST)
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2019ರ ಅಂಗವಾಗಿ ನಡೆಯುವ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 17ರಂದು ಬೆಳಿಗ್ಗೆ 9.15 ಗಂಟೆಗೆ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ ಮಾಡುವರು. ನಂತರ ಅಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

 ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ  ಮುಖ್ಯ ಅತಿಥಿಗಳಾಗಿ  ಪಾಲ್ಗೊಳ್ಳುವರು.

ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು ಪಾಲ್ಗೊಳ್ಳುವರು.
ಕಲ್ಯಾಣ ಕರ್ನಾಟಕ, ದಿನಾಚರಣೆ, ಸಿಎಂ ಬಿ.ಎಸ್.ಯಡಿಯೂರಪ್ಪ, ಸರ್ದಾರ್ ವಲ್ಲಭಭಾಯಿ ಪಟೇಲ್



Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಶ್ಚರ್ಯ : ಬಿಸಿಲ ನಾಡಿನ ಅರಣ್ಯ ಕೃಷಿಯಲ್ಲಿ ಅಮೋಘ ಸಾಧನೆ