Webdunia - Bharat's app for daily news and videos

Install App

ಮಾಧ್ಯಮಗಳ ವಿರುದ್ಧ ಹರಿಹಾಯ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Webdunia
ಶನಿವಾರ, 24 ನವೆಂಬರ್ 2018 (13:21 IST)
ಮತ್ತೆ ಮಾಧ್ಯಮಗಳ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ. ಸಾಲಮನ್ನಾ ವಿಷಯದಲ್ಲಿ ಮಾಧ್ಯಮಗಳಲ್ಲಿ ಕೆಲವು ಗೊಂದಲ ಸುದ್ದಿಗಳು ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಂಡ್ಯದ ದುದ್ದ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಾಲಮನ್ನಾ ವಿಷಯದಲ್ಲಿ ಮಾಧ್ಯಮಗಳಲ್ಲಿ ಕೆಲ ಗೊಂದಲ ಸುದ್ದಿಗಳು ಬರುತ್ತಿವೆ. ಬಿಜೆಪಿ ನಾಯಕರು ಸಾಲಮನ್ನಾ ವಿಷಯದಲ್ಲಿ ಬುರುಡೆ ಭಾಷಣ ಮಾಡ್ತಿದ್ದಾರೆ. ಇದರಿಂದ ಜನರನ್ನು ಚಿಂತೆಗೀಡು ಮಾಡುವಂತೆ ಆಗಿದೆ ಎಂದರು.
ಮಂಡ್ಯದಲ್ಲಿ ಸಿಎಂಗೆ ಆತ್ಮಹತ್ಯೆ ಸ್ವಾಗತ ಎಂದು ಮಾಧ್ಯಮಗಳು ಸುದ್ದಿ ಮಾಡಿವೆ. ಆತ ಕಾಯಿಲೆಯಿಂದ ಬಳಲುತ್ತಿದ್ದ. ಸಿಎಂ ಬರುವ ದಿನ ಆತ್ಮಹತ್ಯೆ ಮಾಡಿಕೊಂಡರೆ ಕುಟುಂಬಕ್ಕೆ ಅನುಕೂಲ ಆಗುತ್ತೆ ಅಂತ ಮಾಡಿಕೊಂಡಿರಬಹುದು.
ಆತನ ಕುಟುಂಬದ ಜೊತೆ ಕೆಲವರು ರೈತ ಸಂಘದ ಹೆಸರೇಳಿಕೊಂಡು ಚಿತಾವಣೆ ಮಾಡಿದ್ದಾರೆ. ಅವನ ಸಾವಿಗೆ ನಾನು ಕಾರಣನಲ್ಲ ಎಂದರು.

ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟವನ್ನು ಮಾಧ್ಯಮದವರು ಬಿಟ್ಟು ಬಿಡದೇ ಹೊಡೆದರು. ಮುಂದಿನ ಬಜೆಟ್ ನಲ್ಲಿ 24 ಸಾವಿರ ಕೋಟಿ ರಾಷ್ಟ್ರೀಕೃತ ಬ್ಯಾಂಕ್ ಸಾಲಮನ್ನಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಬಾಗಲಕೋಟೆಯಲ್ಲಿ ವ್ಯಕ್ತಿಯೊಬ್ಬ ಪ್ರತಿಭಟನೆ ವೇಳೆ ನನ್ನ ಪ್ರತಿಕೃತಿಗೆ ಹೊಡೆಯುತ್ತಿದ್ದಾನೆ. ಯಾಕಪ್ಪ ನನಗೆ ಹೊಡೀತೀಯಾ... ಸಾಲಮನ್ನಾ ಮಾಡಿದೆ ಅಂತ ಹೊಡಿತಿದ್ಯಾ? ಅದನ್ನ ನಮ್ಮ ಮಾಧ್ಯಮದವರು ಐದೈದು ನಿಮಿಷಕ್ಕೂ ತೋರಿಸ್ತಾರೆ ಎಂದರು.

ಎಲೆಕ್ಟ್ರಾನಿಕ್ ಮೀಡಿಯಾ ದಲ್ಲಿ ಅವರವರೇ ವಿಚಾರ ಸೃಷ್ಟಿ ಮಾಡಿ ನನ್ನ ವಿರುದ್ದ ಸುಳ್ಳು ಸುದ್ದಿ ಪ್ರಕಟಿಸ್ತಾರೆ.
ನಾನು ರಾಜಕಾರಣದಲ್ಲಿ ಭಂಡ ಅಲ್ಲ. ಬಡವರ ಕಷ್ಟಕ್ಕೆ ಸ್ಪಂದಿಸ್ತೇನೆ ಎಂದು ಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

ಮುಂದಿನ ಸುದ್ದಿ
Show comments