Select Your Language

Notifications

webdunia
webdunia
webdunia
webdunia

ಮಧ್ಯರಾತ್ರಿ ಧ್ವಜ ಹಾರಿಸಿದ ಸಿಎಂ

ಮಧ್ಯರಾತ್ರಿ ಧ್ವಜ ಹಾರಿಸಿದ ಸಿಎಂ
ಬೆಂಗಳೂರು , ಸೋಮವಾರ, 15 ಆಗಸ್ಟ್ 2022 (07:48 IST)
ಬೆಂಗಳೂರು : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆ ಮಲ್ಲೇಶ್ವರಂ ಸರ್ಕಾರಿ ಕಾಲೇಜು ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ವೇಳೆ ಸಚಿವ ಅಶ್ವಥ್ ನಾರಾಯಣ್ ಉಪಸ್ಥಿತರಿದ್ದರು. ಗಾಯಕಿ ಮಂಗ್ಲಿ ಮತ್ತು ಗಾಯಕರ ತಂಡದಿಂದ ದೇಶಭಕ್ತಿ ಗೀತೆಗಳನ್ನು ಹಾಡಲಾಯಿತು.
ಧ್ವಜಾರೋಹಣದ ಬಳಿಕ ಮಾತಾಡಿದ ಸಿಎಂ, ದೇಶದ ಸ್ವಾತಂತ್ರ್ಯವನ್ನು ಸಂಭ್ರಮಿಸುವ ಕಾಲ ಇದು. ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟವರನ್ನು ನೆನೆಯಬೇಕಾದ ದಿನ.

1824ರಲ್ಲಿ ಕರ್ನಾಟಕದಲ್ಲೇ ಸ್ವಾತಂತ್ರ್ಯದ ಕಿಚ್ಚು ಮೊಳಗಿತ್ತು ಎಂದು ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರನ್ನು ಸ್ಮರಿಸಿದರು. ಹರ್ ಘರ್ ತಿರಂಗವನ್ನು ಕೊಂಡಾಡಿದ ಸಿಎಂ, ಕೊರೊನಾದಿಂದ ದೇಶವನ್ನು ಕಾಪಾಡಿದವರು ಮೋದಿ ಎಂದು ಶ್ಲಾಘಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವಕ್ಕಿರುವ ವ್ಯತ್ಯಾಸವೇನು?