Select Your Language

Notifications

webdunia
webdunia
webdunia
webdunia

ಅನುರಾಗ್ ತಿವಾರಿ ಸಾವಿಗೆ ಸಿಎಂ, ಗೃಹ ಸಚಿವ ಪರಮೇಶ್ವರ್ ಸಂತಾಪ

ಅನುರಾಗ್ ತಿವಾರಿ ಸಾವಿಗೆ ಸಿಎಂ, ಗೃಹ ಸಚಿವ ಪರಮೇಶ್ವರ್ ಸಂತಾಪ
ಬೆಂಗಳೂರು , ಬುಧವಾರ, 17 ಮೇ 2017 (17:03 IST)
ಹಿರಿಯ ಐಎಎಸ್ ಅಧಿಕಾರಿ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಸಾವಿಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
 
ಅನುರಾಗ್ ತಿವಾರಿ ದಕ್ಷ ಅಧಿಕಾರಿಯಾಗಿದ್ದು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ಸಾವಿನಿಂದ ರಾಜ್ಯ ದಕ್ಷ ಅಧಿಕಾರಿಯನ್ನು ಕಳೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ತಿವಾರಿ ಅವರ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿಲ್ಲ. ದೇವರ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದ ಸದಸ್ಯರಿಗೆ ದುಖಃವನ್ನು ತಡೆಯುವ ಶಕ್ತಿ ನೀಡಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
 
ಅನುರಾಗ್ ತಿವಾರಿ ಅವರ ಸಾವಿನ ಬಗ್ಗೆ ಮಾಹಿತಿ ಪಡೆಯಲು ನಾಲ್ವರು ಅಧಿಕಾರಿಗಳು ಲಕ್ನೋ ನಗರಕ್ಕೆ ತೆರಳಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ತಿವಾರಿ ಸಾವು: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಶೋಭಾ ಪತ್ರ