Webdunia - Bharat's app for daily news and videos

Install App

ನಾನು ದಾನ ಕೊಟ್ಟಿದ್ದೇನಷ್ಟೇ ಹೊರತು, ತಗೊಂಡಿಲ್ಲ: ವಕ್ಫ್ ಆಸ್ತಿ ಕಬಳಿಕೆ ಆರೋಪಕ್ಕೆ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ

Krishnaveni K
ಶುಕ್ರವಾರ, 8 ನವೆಂಬರ್ 2024 (13:06 IST)
Photo Credit: Facebook
ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಮಾಡಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ. ನಾನು ದಾನ ಕೊಟ್ಟಿದ್ದಷ್ಟೇ ಹೊರತು, ತಗೊಂಡಿಲ್ಲ ಎಂದಿದ್ದಾರೆ.

ಯತ್ನಾಳ್ ಹೇಳ್ತಾರೆ ನಾನು ವಕ್ಫ್ ಭೂಮಿ ಕಬಳಿಕೆ ಮಾಡಿದ್ದೇನಂತೆ. ನಾನು ಎಲ್ಲಿ ತಗೊಂಡಿದ್ದೇನೆ ಎಂದು ದಾಖಲೆ ಕೊಡು ಇಲ್ಲಾ ಕ್ಷಮೆ ಕೇಳು, ಕೋರ್ಟ್ ಗೆ ಬಂದು ವಿಚಾರಣೆ ಎದುರಿಸು ಎಂದು ಯತ್ನಾಳ್ ಗೆ ಸವಾಲು ಹಾಕಿದ್ದಾರೆ. ಯತ್ನಾಳ್ ಮೇಲೆ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದೂ ಅವರು ಹೇಳಿದ್ದಾರೆ.

ಬಿಜಾಪುರದಲ್ಲಿ ಪ್ರತಿಭಟನೆ ನಡೆದರು. ಅವರಲ್ಲಿ ಯಾರೂ ರೈತರಲ್ಲ. ಎಲ್ಲಾ ಇವರೇನೇ. ಜೆಪಿಸಿ ಅಧ್ಯಕ್ಷರನ್ನೂ ಕರೆತಂದರು. ಅಯ್ಯೋ ಇವರ ಕತೆಯೇ? ಭೂ ಸುಧಾರಣೆ ಕಾಯಿದೆ ಬಂದ ಮೇಲೆ ದೇವಸ್ಥಾನಗಳ ಜಮೀನು ಹೋಯ್ತು ಅದರ ಬಗ್ಗೆ ಏನಾರ ಮಾತಾಡಿದ್ದೀರಾ? ಎಷ್ಟೋ ಮಠಗಳು ವಿದ್ಯಾದಾನ ಮಾಡುವಂತಹ ಸಂಸ್ಥೆಗಳ ಜಮೀನು ಹೋಯ್ತು ಅವುಗಳ ಬಗ್ಗೆ ಮಾತನಾಡಿದ್ದೀರಾ ಇಲ್ಲ’ ಎಂದು ಯತ್ನಾಳ್ ಗೆ ಪ್ರಶ್ನೆ ಮಾಡಿದ್ದಾರೆ.

ಯತ್ನಾಳ್ ಈಗ ಕೇವಲ ರಾಜಕೀಯಕ್ಕಾಗಿ ವಿಷಯವೇ ಇಲ್ಲದ ವಿಷಯ ಇಟ್ಟುಕೊಂಡು ರಾಷ್ಟ್ರವ್ಯಾಪಿ ಹೋರಾಟ ಮಾಡುತ್ತೇವೆ ಎಂದು ವಕ್ಫ್ ವಿಚಾರದಲ್ಲಿ ಹೋರಾಟ ಮಾಡಲು ಹೊರಟಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments