Publish Date: Sun, 09 Feb 2020 (11:13 IST)
Updated Date: Sun, 09 Feb 2020 (11:16 IST)
ಶಿವಮೊಗ್ಗ: ಇಂದು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ತವರು ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ.
ಇಂದು ತವರು ಜಿಲ್ಲೆ ಶಿವಮೊಗ್ಗದ ಶಿಕಾರಿಪುರಕ್ಕೆ ಭೇಟಿ ನೀಡಿದ ಸಿಎಂ ಅವರು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದ್ದಾರೆ.
ಅಹವಾಲು ಸ್ವೀಕರಿಸಿದ ಬಳಿಕ ಸಿಎಂ ಅವರು ಬಜೆಟ್ ನಲ್ಲಿ ಹಾಲಿಗೆ ಪ್ರೋತ್ಸಾಹಧನ ನೀಡುವುದಾಗಿ ಹಾಲು ಉತ್ಪಾದಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.