Webdunia - Bharat's app for daily news and videos

Install App

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನೂತನ ಪೊಲೀಸ್ ಠಾಣೆ ಸಿಎಂಯಿಂದ ಉದ್ಘಾಟನೆ

Webdunia
ಶನಿವಾರ, 4 ಡಿಸೆಂಬರ್ 2021 (19:55 IST)
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನೂತನ ಪೊಲೀಸ್ ಠಾಣೆಯನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. 
ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮಾತನಾಡಿ, ನಮ್ಮ ಮಾನ, ಪ್ರಾಣ ಕಾಪಾಡುವ ಪೊಲೀಸರಿಗೆ ಉತ್ತಮ ಮೂಲಸೌಲಭ್ಯ ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಈ ನಿಟ್ಟಿನಲ್ಲಿ ಸುಸಜ್ಜಿತವಾದ ಪೊಲೀಸ್ ಠಾಣೆ ನಿರ್ಮಿಸುವ ಮೂಲಕ ಪೊಲೀಸರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ನೀಡುವಲ್ಲಿ ವಿ.ಸೋಮಣ್ಣ ಅವರು ಯಶಸ್ವಿಯಾಗಿದ್ದಾರೆ ಎಂದರು.
ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಗೋವಿಂದರಾಜನಗರ ಪೊಲೀಸ್ ಠಾಣೆ ಸುಸಜ್ಜಿತ ಕಟ್ಟಡವಾಗಿದ್ದು, ಈ ಥರದ ಪೊಲೀಸ್ ಠಾಣೆ ಎಲ್ಲಿಯೂ ಕಾಣಸಿಗುವುದಿಲ್ಲ. ವಿ.ಸೋಮಣ್ಣ ಅವರ ಅಭಿವೃದ್ಧಿ ಕಾರ್ಯಗಳು ಹೀಗೆಯೇ ಮುಂದುವರೆಯಲಿ ಎಂದರು.
ವಸತಿ ಸಚಿವ ವಿ.ಸೋಮಣ್ಣ  ಮಾತನಾಡಿ, ಬೆಂಗಳೂರಿನ ಮೂಲಭೂತ ಸೌಲಭ್ಯಗಳಿಗೆ ಹೇಗೆ ಒತ್ತು ನೀಡಬೇಕೆಂದು ಹಿರಿಯ ನಾಯಕರಿಂದ ಕಲಿತಿದ್ದೇನೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಗೋವಿಂದರಾಜನಗರ ವಿಶಾಲವಾದ ಕ್ಷೇತ್ರ. ಹೀಗಾಗಿ ಇಲ್ಲಿಗೆ ಪ್ರತ್ಯೇಕ ಪೊಲೀಸ್ ಠಾಣೆಯ ಅವಶ್ಯಕತೆಯಿತ್ತು. ಪೊಲೀಸ್ ಠಾಣೆಯ ನಿರ್ಮಾಣದ ಮೂಲಕ ಕ್ಷೇತ್ರದ ಜನತೆಯ ಅಳಿಲು ಸೇವೆ ಮಾಡಿದ್ದೇನೆ. ಗೋವಿಂದರಾಜನಗರ ಹಾಗೂ ವಿಜಯನಗರ ನನ್ನ ಎರಡು ಕಣ್ಣುಗಳಿದ್ದಂತೆ. ಗೋವಿಂದರಾಜನಗರದ ಅಭಿವೃದ್ಧಿಯ ಜೊತೆಗೇ ವಿಜಯನಗರದ ಅಭಿವೃದ್ಧಿಯೂ ನಮ್ಮ ಹೊಣೆ. ಸಾಮಾನ್ಯ ಜನರ ನೋವನ್ನು ಪರಿಹರಿಸಲು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸುವುದೇ ನನ್ನ ಸಂಕಲ್ಪ ಎಂದರು.
ಸಂಸದ ತೇಜಸ್ವಿ ಸೂರ್ಯ, ಶಾಸಕ ಎ.ದೇವೇಗೌಡ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments