Publish Date: Sat, 14 Jan 2023 (19:13 IST)
Updated Date: Sat, 14 Jan 2023 (19:17 IST)
ತಾವು ನೀಡಿದ ಆಶ್ವಾಸನೆಯಂತೆ ಮತ್ತು ಸುಪ್ರೀಮ್ ಕೋರ್ಟ್ ನೀಡಿರುವ ಅದೇಶದ ಅನ್ವಯ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಯೋಗ ವರದಿಯಲ್ಲಿನ ಶಿಫಾರಸ್ಸುಗಳ ಪ್ರಕಾರ ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹೆಚ್ಚಳವನ್ನು ಘೋಷಣೆ ಮಾಡಿ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.ನಂತರ ಅವರು ಸದಾ ತಮ್ಮ ಪಕ್ಷದ ನಾಯಕರ ಬಗ್ಗೆ ಟೀಕೆ ಮಾಡುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ತನ್ನ ಮಾತಿನ ಮೇಲೆ ಹಿಡಿತ ಸಾಧಿಸುವಂತೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.