Publish Date: Fri, 20 Jan 2023 (11:19 IST)
Updated Date: Fri, 20 Jan 2023 (09:50 IST)
ಬೆಂಗಳೂರು : ಜನಪ್ರಿಯ ಯೋಜನೆಗಳ ಬಗ್ಗೆ ಪ್ಲ್ಯಾನ್ ಮಾಡಿ, ಬ್ಲೂಪ್ರಿಂಟ್ ಕೊಡಿ. ಮಹಿಳೆಯರು, ರೈತರು, ಶ್ರಮಿಕ ವರ್ಗ ಗಮನದಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳು ಇರಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ ಎನ್ನಲಾಗಿದೆ.
ಹಣಕಾಸು ಇಲಾಖೆ ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಗೃಹಲಕ್ಷ್ಮಿ ಯೋಜನೆಗೆ ಸರಿಯಾಗಿ ನಿಲ್ಲುವಂತಹ ಪ್ಲ್ಯಾನ್ ಮಾಡಿ ಎಂದಿದ್ದಾರೆ ಎಂಬುದು ಮೂಲಗಳ ಮಾಹಿತಿಯಾಗಿದೆ.