Select Your Language

Notifications

webdunia
webdunia
webdunia
webdunia

ದಲಿತರ ಮೇಲೆ ಹಲ್ಲೆ ನಡೆದರೆ ಸಿಎಂ ಸಿದ್ದರಾಮಯ್ಯ ಹೊಣೆ: ಯಡಿಯೂರಪ್ಪ

ದಲಿತರ ಮೇಲೆ ಹಲ್ಲೆ ನಡೆದರೆ ಸಿಎಂ ಸಿದ್ದರಾಮಯ್ಯ ಹೊಣೆ: ಯಡಿಯೂರಪ್ಪ
ಕೊಪ್ಪಳ , ಸೋಮವಾರ, 29 ಮೇ 2017 (15:40 IST)
ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ ನಡೆದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.
 
ಸವರ್ಣಿಯರಿಂದ ದಲಿತರ ಮೇಲೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರ ದಲಿತರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಗುಡುಗಿದರು.
    
ದಲಿತರ ಮನೆಯಲ್ಲಿ ಊಟ ಮಾಡುವುದು ನನ್ನ ನಿರ್ಧಾರ. ವಿಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ಉತ್ತರಿಸಲಾರೆ. ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ದಲಿತರ, ಶೋಷಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಆದಾಗ್ಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಠಿಣ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಹೋಟೆಲ್, ಬೇಕರಿ, ಮೆಡಿಕಲ್ ಶಾಪ್‌ಗಳು ಬಂದ್