Publish Date: Tue, 16 Jan 2018 (14:30 IST)
Updated Date: Tue, 16 Jan 2018 (14:39 IST)
ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಅವರ ಉಗ್ರವಾದಿ ಹೇಳಿಕೆಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಮಂಗಳವಾರ(ಇಂದು) ಸಂಸದ ಪ್ರಹ್ಲಾದ್ ಜೋಶಿ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
‘ಸಿಎಂ ಪಾಕಿಸ್ತಾನಕ್ಕೆ ಬೆಂಬಲಿಸುತ್ತಿದ್ದಾರಾ, ಸ್ಪಷ್ಟಪಡಿಸಬೇಕು. ಇಲ್ಲವಾದಲ್ಲಿ ಸಿಎಂ ಹೇಳಿಕೆಯನ್ನು ವಾಪಾಸು ಪಡೆಯಬೇಕು’ ಎಂದು ಹೇಳಿದ್ದಾರೆ. ಹಾಗೆ ರೋಷನ್ ಬೇಗ್ ಗೆ ಇಡಿ ನೋಟಿಸು ಜಾರಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ರೋಷನ್ ಬೆಗ್ ಅವರು ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲವಾದಲ್ಲಿ ಸಿಎಂ ರಾಜೀನಾಮೆ ಪಡೆಯಬೇಕು ಎಂದು ಸಂಸದ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿಯಲ್ಲಿ ಇಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ