Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಕೇಳಿದ್ದೇನು?

Webdunia
ಶನಿವಾರ, 15 ಜೂನ್ 2019 (18:01 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಪ್ರಧಾನಮಂತ್ರಿಯಾಗಿ ಪುನರಾಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲ ಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚಿಸಿದರು.

ರಾಜ್ಯದಲ್ಲಿ ಈ ವರ್ಷವೂ ಬರದ ಛಾಯೆ ಇದ್ದು ಶೇ. 45 ರಷ್ಟು ಮಳೆ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಮುಂದಾಗಬೇಕೆಂದರು.

ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರಾಜ್ಯ ಸರ್ಕಾರ ಕೂಲಿಯ ಬಾಬ್ತು ಪಾವತಿಸಿದ 1200 ಕೋಟಿ ರೂ. ಮುಂಗಡ ಹಣವೂ ಸೇರಿದಂತೆ ಸುಮಾರು 1500 ಕೋಟಿ ರೂ. ಅನುದಾನ ಬಾಕಿ ಇದೆ. ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೋರಿದರು.

ರಾಜ್ಯದಲ್ಲಿ ಸಾಲ ಮನ್ನಾ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ, ಪಾರದರ್ಶಕವಾಗಿ ಅನುಷ್ಠಾನಗೊಳಿಸಲಾಗಿದೆ. ವಾಣಿಜ್ಯ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಒಟ್ಟು 30 ಲಕ್ಷ ರೈತರ 16000 ಕೋಟಿ ರೂಪಾಯಿ ಸಾಲಮನ್ನಾ ಸೌಲಭ್ಯಕ್ಕೆ ಅರ್ಹ ಎಂದು ಗುರುತಿಸಲಾಗಿತ್ತು.

ಅದರಲ್ಲಿ ಈ ವರೆಗೆ ದಾಖಲೆಗಳನ್ನು ಒದಗಿಸಿದ ರಾಜ್ಯದ ವಾಣಿಜ್ಯ ಬ್ಯಾಂಕುಗಳ 9 ಲಕ್ಷ ಹಾಗೂ ಸಹಕಾರಿ ಬ್ಯಾಂಕುಗಳ 14 ಲಕ್ಷ ಫಲಾನುಭವಿಗಳ ಒಟ್ಟು 12830 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲು ಕ್ರಮ ವಹಿಸಲಾಗಿದೆ. ಫಲಾನುಭವಿಗಳನ್ನು ಗುರುತಿಸುವಲ್ಲಿ ಕೆಲವು ಬ್ಯಾಂಕುಗಳಿಂದ ಲೋಪವಾದ್ದರಿಂದ ಸ್ವಲ್ಪ ಗೊಂದಲ ಉಂಟಾಗಿತ್ತು. ನಿನ್ನೆ ಬ್ಯಾಂಕರ್ ಗಳ ಸಭೆ ನಡೆಸಿ ಗೊಂದಲ ಬಗೆಹರಿಸಲಾಯಿತು ಎಂದು  ವಿವರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments