Webdunia - Bharat's app for daily news and videos

Install App

ಕರ್ನಾಟಕ ಬಜೆಟ್: ಬೆಂಗಳೂರಿಗೆ ಸಿಕ್ಕಿದ್ದೇನು?

Webdunia
ಗುರುವಾರ, 5 ಜುಲೈ 2018 (12:16 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ಮಂಡಿಸುತ್ತಿದ್ದು, ರಾಜಧಾನಿ ಬೆಂಗಳೂರಿಗೆ ಕೆಲವು ಕೊಡುಗೆಗಳನ್ನು ನೀಡಿದ್ದಾರೆ.

ಮೆಟ್ರೋ ಮೂರನೇ ಹಂತದ ಕಾಮಗಾರಿ ಆರಂಭಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಅದರಲ್ಲಿ ಜೆಪಿ ನಗರದಿಂದ ಕೆಆರ್ ಪುರಂವರೆಗೆ ಮೆಟ್ರೋ ಕಾಮಗಾರಿ ಮಾಡುವುದಾಗಿ ಘೋಷಿಸಿದ್ದಾರೆ.

ಇನ್ನು, ಬಿಎಂಟಿಸಿಗೆ ನೇರವಾಗಿ 100 ಕೋಟಿ ರೂ. ಸಹಾಯ ಧನ ನೀಡಲಾಗಿದೆ. ಅದಲ್ಲದೆ, ಬಿಎಂಟಿಸಿ ವತಿಯಿಂದ 80 ಇಲೆಕ್ಟ್ರಿಕ್ ಬಸ್ ಗಳನ್ನು ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಇನ್ನು, ಕಲುಷಿತಗೊಂಡಿರುವ ಬೆಳಂದೂರು ಕೆರೆ ಸೇರಿದಂತೆ ನಗರದ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಇನ್ನು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದು, ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ಆರಂಭಿಕ ಹಂತದಲ್ಲಿ 1000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗುವುದು. ನಂತರ ಇದನ್ನು ವಿಸ್ತರಿಸುವ ಯೋಜನೆಯಿದೆ. ಇನ್ನು ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments