Select Your Language

Notifications

webdunia
webdunia
webdunia
webdunia

ಕರುಣಾನಿಧಿ ಪುತ್ರನಿಗೆ ಕರೆ ಮಾಡಿದ ಸಿಎಂ ಕುಮಾರಸ್ವಾಮಿ

ಕರುಣಾನಿಧಿ ಪುತ್ರನಿಗೆ ಕರೆ ಮಾಡಿದ ಸಿಎಂ ಕುಮಾರಸ್ವಾಮಿ
ಬೆಂಗಳೂರು , ಶನಿವಾರ, 28 ಜುಲೈ 2018 (10:58 IST)
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಪುತ್ರ ಎಂಕೆ ಸ್ಟಾಲಿನ್ ಗೆ ಸಿಎಂ ಕುಮಾರಸ್ವಾಮಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ನಿನ್ನೆ ತಡರಾತ್ರಿ ರಕ್ತದೊತ್ತಡ ಏರುಪೇರಾದ ಹಿನ್ನಲೆಯಲ್ಲಿ ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿಯವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕರುಣಾನಿಧಿ ಆರೋಗ್ಯ  ಸುಧಾರಿಸಲು ಪ್ರಧಾನಿ ಮೋದಿ,  ರಾಷ್ಟ್ರಪತಿ ಕೋವಿಂದ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ರಾಜಕೀಯ ಮುಖಂಡರು ಹಾರೈಸಿದ್ದಾರೆ. ಈ ನಡುವೆ ಸಿಎಂ ಕುಮಾರಸ್ವಾಮಿ ನಿನ್ನೆ ಎಂಕೆ ಸ್ಟಾಲಿನ್ ಗೆ ಕರೆ ಮಾಡಿ ಕರುಣಾನಿಧಿ ಆರೋಗ್ಯದ ಬಗ್ಗೆ ವಿಚಾರಿಸಿಕೊಂಡರಲ್ಲದೆ, ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ನೀಡಿದ ಅಟೋಗ್ರಾಫ್ ನಿಂದಲೇ ಸೆಲೆಬ್ರಿಟಿಯಾದಳು!