Webdunia - Bharat's app for daily news and videos

Install App

ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 21 ನವೆಂಬರ್ 2018 (09:01 IST)
ಬೆಂಗಳೂರು: ಕಬ್ಬು ಬೆಳೆಗಾರರ ಅಸಮಾಧಾನ ತಮಗೆ ಕುತ್ತು ತರುವ ಲಕ್ಷಣಗಳಿದ್ದಾಗಲೇ ಸಿಎಂ ಕುಮಾರಸ್ವಾಮಿ ನಿನ್ನೆ ನಡೆದ ರೈತರ ಜತೆಗಿನ ಸಭೆಯಲ್ಲಿ ತಾತ್ಕಾಲಿಕ ಪರಿಹಾರ ನೀಡಿ ವಿವಾದ ಸದ್ಯದ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಕಬ್ಬು ಬೆಳೆಗಾರರು ಮತ್ತು ಕಾರ್ಖಾನೆ ಮಾಲಿಕರ ಪ್ರತಿನಿಧಿಗಳ ಜತೆ ನಿನ್ನೆ ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಪ್ರತಿಭಟನೆಯ ಬಿಕ್ಕಟ್ಟನ್ನು ತಾತ್ಕಾಲಿಕವಾಗಿ ಶಮನ ಮಾಡಿದ್ದಾರೆ. ಕಬ್ಬು ಬೆಳೆಗಾರರಿಗೆ ಬಾಕಿ ನೀಡುವ ಕುರಿತಂತೆ ಸಿಎಂ ಭರವಸೆ ನೀಡಿದ್ದಾರೆ.

ಆದರೆ ಸಿಎಂ ಭರವಸೆ ನೀಡಿದಷ್ಟು ಇದು ಸುಲಭವಲ್ಲ. ಯಾಕೆಂದರೆ ಕಾರ್ಖಾನೆ ಮಾಲಿಕರು ಬಾಕಿ ಹಣ ಪಾವತಿ ವಿಚಾರದಲ್ಲಿ ಸರ್ಕಾರದ ಸಂಧಾನಕ್ಕೆ ಒಪ್ಪಿಕೊಂಡಿಲ್ಲ. ಹೀಗಾಗಿ ಇಂದು ಮತ್ತೆ ಕಾರ್ಖಾನೆ ಮಾಲಿಕರರ ಮನ ಒಲಿಸಲು ಸಿಎಂ ಸಭೆ ಕರೆದಿದ್ದಾರೆ. ಕಾರ್ಖಾನೆಗಳು ನಷ್ಟದಲ್ಲಿರುವುದರಿಂದ ರೈತರ ಬೇಡಿಕೆಯಂತೆ ಟನ್ ಗೆ 2900 ರೂ. ಗಳಂತೆ ದರ ನೀಡಲು ಮಾಲಿಕರ ಪ್ರತಿನಿಧಿಗಳು ಒಪ್ಪಿಕೊಂಡಿಲ್ಲ. ಹೀಗಾಗಿ ಸಿಎಂಗೆ ಹೊಸ ತಲೆನೋವು ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments