ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಕೊಟ್ಟ ಗಿಫ್ಟ್ ಏನು ಗೊತ್ತಾ?

Webdunia
ಮಂಗಳವಾರ, 11 ಸೆಪ್ಟಂಬರ್ 2018 (09:46 IST)
ನವದೆಹಲಿ: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ವಿವರಣೆ ನೀಡಿ ಕೇಂದ್ರದ ನೆರವು ಕೇಳಲು ಹೋಗಿದ್ದ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ.

ರಾಜ್ಯದ ನಿಯೋಗದ ಜತೆಗೆ ಹೋಗಿದ್ದ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ರಾಜ್ಯದ ನೆರೆ ಪೀಡಿತ ಪ್ರದೇಶಗಳ ಕುರಿತು ಮನದಟ್ಟು ಮಾಡಿದರಲ್ಲದೆ 2000 ಕೋಟಿ ರೂ. ನೆರವಿನ ಪ್ಯಾಕೇಜ್ ನೀಡುವಂತೆಯೂ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯದ ನಿಯೋಗವನ್ನು ಆತ್ಮೀಯವಾಗಿ ಬರಮಾಡಿಕೊಂಡ ಪ್ರಧಾನಿ ಮೋದಿ ವಿಶೇಷವಾಗಿ ಎಚ್ ಡಿ ದೇವೇಗೌಡರ ಜತೆಗೆ ಹಾಸ್ಯ ಚಟಾಕಿ ಹಾರಿಸಿದರು. ಪ್ರಧಾನಿ ಭೇಟಿ ಬಳಿಕ ಸಿಎಂ ಕುಮಾರಸ್ವಾಮಿ ಉಡುಗೊರೆಯಾಗಿ ಪುಸ್ತಕವೊಂದನ್ನು ನೀಡಿದರು. ಖ್ಯಾತ ಪ್ರವಾಸಿ ಲೇಖಕ ಡ್ಯಾಮ್ ಮೊರೇಸ್ ಬರೆದ ಕರ್ನಾಟಕದ ಬಗೆಗೆ ವಿವರ ನೀಡುವ ‘ದಿ ಓಪನ್ ಐಸ್: ಎ ಜರ್ನಿ ಥ್ರೂ ಕರ್ನಾಟಕ’ ಎಂಬ ಪುಸ್ತಕವನ್ನು ಸಿಎಂ ಎಚ್ ಡಿಕೆ ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಈ ಮೊದಲೇ ಪ್ರಧಾನಿ ಮೋದಿ ತಮ್ಮನ್ನು ಭೇಟಿಯಾಗುವವರು ಉಡುಗೊರೆ ನೀಡಬೇಕೆಂದಿದ್ದರೆ ಬೇರೇನೋ ನೀಡಿ ಹಣ ಪೋಲು ಮಾಡುವ ಬದಲು ಪುಸ್ತಕ ಅಥವಾ ಒಂದು ಗುಲಾಬಿ ಹೂ ನೀಡಿದರೆ ಸಾಕು ಎಂದಿದ್ದರು. ಅದರಂತೆ ಸಿಎಂ ಎಚ್ ಡಿಕೆ ಅಮೂಲ್ಯವಾದ ಉಡುಗೊರೆಯನ್ನೇ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಎಸ್‌ಎ, ಇರಾನ್ ಶಾಂತಿ ಮಾತುಕತೆ ದಿಡೀರ್ ರದ್ದು

ಮೇಕೆದಾಟುವಿಗಾಗಿ ಕರ್ನಾಟಕ ವಿರುದ್ಧ ಪಕ್ಷಬೇಧ ಮರೆತು ಒಂದಾದ ತಮಿಳುನಾಡು: ಕರ್ನಾಟಕದಲ್ಲಿ ಮಾತ್ರ....

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಮುಂದಿನ ಸುದ್ದಿ
Show comments