Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ಏರ್ಪಡಿಸಿದ ಸಂಸದರ ಸಭೆಗೆ ಆಗಮಿಸುವವರಿಗೆ ‘ಗಿಫ್ಟ್ ವಿವಾದ’

Webdunia
ಬುಧವಾರ, 18 ಜುಲೈ 2018 (10:35 IST)
ನವದೆಹಲಿ: ಇಂದು ದೆಹಲಿಯಲ್ಲಿ ಕಾವೇರಿ ನದಿ ಪ್ರಾಧಿಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಕರೆದಿದ್ದ ಸಂಸದರ ಸಭೆಗೆ ಕಳಂಕವೊಂದು ಅಂಟಿದೆ.

ಸಿಎಂ ಸಭೆಗೆ ಆಗಮಿಸುವ ಸಂಸದರಿಗೆ ಒಂದು ಲಕ್ಷ ರೂ. ಬೆಲೆ ಬಾಳುವ ಐಫೋನ್ ಗಿಫ್ಟ್ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸಂಕಷ್ಟದಲ್ಲಿರುವಾಗ ದುಬಾರಿ ಗಿಫ್ಟ್ ನ ಅವಶ್ಯಕತೆ ಏನಿತ್ತು ಎಂದು ಬಿಜೆಪಿ ಸಂಸದರು ಪ್ರಶ್ನಿಸಿದ್ದಾರೆ.

ಆದರೆ ಈ ಬಗ್ಗೆ ನನಗೆ ಮಾಹಿತಿಯಿಲ್ಲ, ನಾನಂತೂ ಗಿಫ್ಟ್ ಕೊಡಲು ಸೂಚಿಸಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಸಚಿವ ಡಿಕೆ ಶಿವಕುಮಾರ್ ಈ ಗಿಫ್ಟ್ ಕೊಟ್ಟಿರುವುದು ನಾನೇ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಹೃದಯ ಶ್ರೀಮಂತಿಕೆಯಿಂದ ಸಂಸದರಿಗೆ ಉಡುಗೊರೆ ಕೊಟ್ಟಿದ್ದೇನೆ. ಕಳೆದ ವರ್ಷವೂ ಕೊಟ್ಟಿದ್ದೆ. ಸಂಸದರಿಗೆ ತ್ವರಿತವಾಗಿ ಮಾಹಿತಿ ತಲುಪಿಸಲು ಅನುಕೂಲವಾಗಲಿ ಎಂದು ಗಿಫ್ಟ್ ಕೊಟ್ಟಿದ್ದೇನೆ. ಒಳ್ಳೆಯ ಉದ್ದೇಶದಿಂದ ಕೊಟ್ಟಿದ್ದೇನೆ’ ಎಂದಿದ್ದಾರೆ.

ಈ ವಿಚಾರವೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ ಸದಸ್ಯರು ತಮಗೆ ಗಿಫ್ಟ್ ಬೇಡವೆಂದು ಮರಳಿಸುತ್ತಿದ್ದಾರೆ. ಸಂಸದರು ಚರ್ಚಿಸಬೇಕಾದ ವಿಚಾರಗಳ ವಿವರಗಳಿರುವ ಕಿಟ್ ನಲ್ಲಿ ಐಫೋನ್ ಕೂಡಾ ಹಾಕಿ ಕೊಡಲಾಗಿದೆ. ಬಿಜೆಪಿಯ ಎಲ್ಲಾ ಸದಸ್ಯರು ಐಫೋನ್ ಸ್ವೀಕರಿಸದೇ ಇರಲು ತೀರ್ಮಾನಿಸಿದ್ದೇವೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments