Webdunia - Bharat's app for daily news and videos

Install App

ಬಿಜೆಪಿ ಆಪರೇಷನ್ ಕಮಲಕ್ಕೆ ಸಿಎಂ ಕುಮಾರಸ್ವಾಮಿ ಭರ್ಜರಿ ಪ್ರತಿತಂತ್ರ

Webdunia
ಮಂಗಳವಾರ, 4 ಡಿಸೆಂಬರ್ 2018 (09:30 IST)
ಬೆಂಗಳೂರು: ಮತ್ತೆ ಸಮ್ಮಿಶ್ರ ಸರ್ಕಾರ ಬೀಳಿಸಲು ಆಪರೇಷನ್ ಕಮಲಕ್ಕೆ ತೆರೆಮರೆಯ ಪ್ರಯತ್ನ ನಡೆಸುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆಯಲು ಸಿಎಂ ಕುಮಾರಸ್ವಾಮಿ ಭರ್ಜರಿ ತಂತ್ರವನ್ನೇ ಹೆಣೆದಿದ್ದಾರೆ.


ಕಾಂಗ್ರೆಸ್ ನ ಅತೃಪ್ತ ಶಾಸಕರನ್ನೇ ಗುರಿಯಾಗಿಸಿ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ಈಗ ಸಿಎಂ ಕುಮಾರಸ್ವಾಮಿ ಅಂತಹ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲು ಮುಂದಾಗಿದ್ದಾರೆ.

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ, ಶಾಸಕರು ಹೇಳಿದ ಅಧಿಕಾರಿಗಳ ವರ್ಗಾವಣೆಗೆ ಮನ್ನಣೆ ನೀಡುವುದು, ಜೆಡಿಎಸ್ ಶಾಸಕರ ಪ್ರಾಬಲ್ಯವಿರುವಲ್ಲಿ ಕಾಂಗ್ರೆಸ್ ಶಾಸಕರು, ನಾಯಕರಿಗೆ ಅವಮಾನವಾಗದಂತೆ ನಡೆದುಕೊಳ್ಳುವ ಇತ್ಯಾದಿ ಭರ್ಜರಿ ತಂತ್ರವನ್ನೇ ಕುಮಾರಸ್ವಾಮಿ ಮಾಡಿದ್ದಾರೆ. ಈ ಮೂಲಕ ಅತೃಪ್ತರು ಬಿಜೆಪಿ ಕಡೆ ವಾಲದಂತೆ ನೋಡಿಕೊಂಡಿದ್ದಾರೆ.

ಯಾವುದೇ ಕಾರಣಕ್ಕೂ ಬಿಜೆಪಿಗೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಾಗದು. ಸಮ್ಮಿಶ್ರ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ಆದರೂ ಬಿಜೆಪಿಯವರು ಸರ್ಕಾರ ಕೆಡವಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments