Publish Date: Fri, 06 Jul 2018 (10:23 IST)
Updated Date: Fri, 06 Jul 2018 (10:24 IST)
ಬೆಂಗಳೂರು: ಬಜೆಟ್ ನಲ್ಲಿ ಕರಾವಳಿ, ಉತ್ತರ ಕರ್ನಾಟಕ ಭಾಗಗಳನ್ನು ನಿರ್ಲಕ್ಷಿಸಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸುವುದಾಗಿ ಹೇಳಿದ್ದಾರೆ.
ಕರಾವಳಿ, ಉತ್ತರ ಕರ್ನಾಟಕ ಭಾಗಗಳನ್ನು ನಿರ್ಲಕ್ಷಿಸಿ ಕೇವಲ ಹೊಳೆನರಸೀಪುರ, ಹಾಸನ, ರಾಮನಗರಕ್ಕೆ ಬಂಪರ್ ಕೊಡುಗೆಗಳನ್ನು ನೀಡಿದ್ದಕ್ಕೆ ಸಿಎಂ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದು ಅಣ್ಣ ತಮ್ಮನ ಬಜೆಟ್ ಎಂದು ಸಿಎಂ ಮತ್ತು ಸಹೋದರ, ಸಚಿವ ರೇವಣ್ಣಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದರು.
ಈ ಆಕ್ರೋಶದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ಬಿಜೆಪಿ ಆಕ್ರೋಶಗಳಿದ್ದರೆ ಸದನದಲ್ಲಿ ಪ್ರಸ್ತಾಪಿಸಲಿ. ಅಲ್ಲಿಯೇ ಅದಕ್ಕೆ ಉತ್ತರ ಕೊಡುವೆ ಎಂದಿದ್ದಾರೆ.
ಇನ್ನೊಂದೆಡೆ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಮ್ಮ ಸರ್ಕಾರ ತಾಯಿ ಸ್ಥಾನದಲ್ಲಿದೆ ಎಂದಿದ್ದ ಸಿಎಂ ಕುಮಾರಸ್ವಾಮಿಯೇ ಇಂದು ಕರಾವಳಿಯನ್ನು ನಿರ್ಲಕ್ಷಿಸಿದ್ದಾರೆ. ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.