Select Your Language

Notifications

webdunia
webdunia
webdunia
webdunia

ಸಿಎಂ ಕುಮಾರಸ್ವಾಮಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು-ಆರ್. ಅಶೋಕ್

ಸಿಎಂ ಕುಮಾರಸ್ವಾಮಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು-ಆರ್. ಅಶೋಕ್
ಬೆಂಗಳೂರು , ಸೋಮವಾರ, 28 ಮೇ 2018 (14:48 IST)
ಬೆಂಗಳೂರು : ನಾನು ರಾಜ್ಯದ ಜನತೆ ಮುಲಾಜಿನಲ್ಲಿ ಇಲ್ಲ, ಬದಲಿಗೆ ಕಾಂಗ್ರೆಸ್ ನ ಮುಲಾಜಿನಲ್ಲಿದ್ದೇನೆ ಎಂಬ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಇದೀಗ ಮಾಜಿ ಡಿಸಿಎಂ ಆರ್. ಅಶೋಕ್ ಅವರು ಸಿಎಂ ಕುಮಾರಸ್ವಾಮಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಶಾಸಕರನ್ನು ಗೆಲ್ಲಿಸಿರುವ 38 ಕ್ಷೇತ್ರದ ಜನ ನಮ್ಮ ರಾಜ್ಯದವರೇ ಹೊರತು ಬೇರೆ ರಾಜ್ಯದವರಲ್ಲ, ಹೀಗಾಗಿ ಸಿಎಂ ಕುಮಾರಸ್ವಾಮಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು. ಕೊಟ್ಟ ಮಾತನ್ನು ಕುಮಾರಸ್ವಾಮಿ ಉಳಿಸಿಕೊಂಡಿಲ್ಲ. ಚುನಾವಣೆಯಲ್ಲಿ ಹೇಳಿದ ಮಾತನ್ನು ಈಡೇರಿಸಿ ಅಂತ ಕೇಳುತ್ತಿದ್ದೇವೆ. ರೈತರಿಗೆ ದನಿಯಾಗಲು ರಾಜ್ಯ ಬಂದ್ ಗೆ ಬೆಂಬಲ ಸೂಚಿಸಿದ್ದೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ