Webdunia - Bharat's app for daily news and videos

Install App

ನಾನು ಯಾವುದೇ ಜಾತಿ, ಭಾಗಕ್ಕೆ ಮಾತ್ರ ಮುಖ್ಯಮಂತ್ರಿಯಾಗಿಲ್ಲ: ಸಿಎಂ ಎಚ್ ಡಿಕೆ

Webdunia
ಸೋಮವಾರ, 9 ಜುಲೈ 2018 (11:43 IST)
ಬೆಂಗಳೂರು: ಬಜೆಟ್ ಮೇಲಿನ ಪ್ರಶ್ನೋತ್ತರ ಕಲಾಪ ವಿಧಾನಸಭೆಯಲ್ಲಿ ಆರಂಭಗೊಂಡಿದ್ದು, ಸಿಎಂ ಎಚ್ ಡಿ ಕುಮಾರಸ್ವಾಮಿ ವಿಪಕ್ಷ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಎಂ ಕುಮಾರಸ್ವಾಮಿ ತಮ್ಮ ಮೇಲಿನ ತಾರತಮ್ಯ ಆರೋಪಕ್ಕೆ ತಿರುಗೇಟು ನೀಡಿದ್ದು ನಾನು ಯಾವುದೇ ಜಾತಿ, ಭಾಗಕ್ಕೆ ಮಾತ್ರ ಮುಖ್ಯಮಂತ್ರಿಯಾಗಿಲ್ಲ ಎಂದಿದ್ದಾರೆ. ಸಿಎಂ ಹೀಗೆ ಹೇಳುತ್ತಿದ್ದಂತೇ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

‘ನಾನು ಯಾವುದೋ ಒಂದು ಭಾಗಕ್ಕೆ ಮುಖ್ಯಮಂತ್ರಿಯಾಗಿಲ್ಲ. ಹಾಸನಕ್ಕೆ ರಿಂಗ್ ರೋಡ್ ನಿರ್ಮಿಸಲು 30 ಕೋಟಿ ರೂ. ಕೊಟ್ಟಿದ್ದೇನೆಂದರೆ ಆಕ್ಷೇಪ ವ್ಯಕ್ತಪಡಿಸುತ್ತೀರಿ. ಹಾಸನದಲ್ಲಿ ನಾನಾ ಶಾಸಕ? ಬಿಜೆಪಿಯವರು ಶಾಸಕರು. ನಿಮಗೆ ಬೇಡ್ವಾ? ಬೇಡಾಂದ್ರೆ ಕೊಡಿ, ಅದನ್ನೇ ಉತ್ತರ ಕರ್ನಾಟಕಕ್ಕೆ ಕೊಡ್ತೀನಿ. ಯಾವ ಭಾಗಕ್ಕೆ ಯಾವ ಸರ್ಕಾರದ ಅವಧಿಯಲ್ಲಿ ಎಷ್ಟೆಷ್ಟು ಖರ್ಚು ಮಾಡಲಾಗಿದೆ ಎನ್ನುವುದು ಈ ಸದನದಲ್ಲೇ ಚರ್ಚೆಯಾಗಲಿ’ ಎಂದು ಸಿಎಂ ಕುಮಾರಸ್ವಾಮಿ ಸವಾಲು ಹಾಕಿದರು. ಸಿಎಂ ಸವಾಲಿಗೆ ಪ್ರತಿಪಕ್ಷ ಬಿಜೆಪಿ ಸದಸ್ಯರು 50 ವರ್ಷಗಳ ಸಾಧನೆಗಳು ಚರ್ಚೆಯಾಗಲಿ ಎಂದು ಪ್ರತಿ ಸವಾಲು ಹಾಕಿದರು.

ಇನ್ನು ಸಾಲ ಮನ್ನಾ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಒಂದು ಒಳ್ಳೆ ಮಾತಾಡಿಲ್ಲ ಎಂದು ಬಿಜೆಪಿಗೆ ಸಿಎಂ ಕುಮಾರಸ್ವಾಮಿ ಟಾಂಗ್ ಕೊಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments