Publish Date: Mon, 18 Jun 2018 (10:57 IST)
Updated Date: Mon, 18 Jun 2018 (10:59 IST)
ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಎದ್ದಿರುವ ಅಸಮಾಧಾನದ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರೇ ಇದನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ನವದೆಹಲಿಯಲ್ಲಿರು ಸಿಎಂ, ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಅವರ ಸಮಸ್ಯೆಯನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ. ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಸುಭದ್ರ ಸರ್ಕಾರ’ ಎಂದಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿರುವ ಸಿಎಂ ಎಚ್ ಡಿಕೆ ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಕೇಂದ್ರ ನಾಯಕರನ್ನು ಕೋರಿರುವುದಾಗಿ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.