ಸಾಲಮನ್ನಾದಿಂದ ನನಗೆ ಕಮಿಷನ್ ಬರಲ್ಲ: ಸಿದ್ದುಗೆ ಟಾಂಗ್ ಕೊಟ್ಟರಾ ಸಿಎಂ ಎಚ್ ಡಿಕೆ?

Webdunia
ಸೋಮವಾರ, 25 ಜೂನ್ 2018 (11:17 IST)
ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ದೋಸ್ತಿ ಪಕ್ಷಗಳ ನಡುವೆ ನಡೆಯುತ್ತಿರುವ ಹಗ್ಗಜಗ್ಗಾಟದ ಬಗ್ಗೆ ಸಿಎಂ ಕುಮಾರಸ್ವಾಮಿ ಗರಂ ಆಗಿಯೇ ಪ್ರತಿಕ್ರಿಯಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಸಾಲಮನ್ನಾ ಮಾಡಲು ಹಣ ಎಲ್ಲಿಂದ ತರುತ್ತಾರೆ ಎಂದು ತಮ್ಮ ಆಪ್ತರ ಬಳಿ ಹೇಳಿದ್ದಾರೆಂಬ ಬೆನ್ನಲ್ಲೇ ಸಿಎಂ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

‘ಸಾಲಮನ್ನಾದಿಂದ ನನಗೆ ಕಮಿಷನ್ ಸಿಗಲ್ಲ. ನಾನು ಯಾರ ಹಂಗಿನಲ್ಲೂ ಇಲ್ಲ’ ಎಂದು ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಗರಂ ಆಗಿಯೇ ಪ್ರತಿಕ್ರಿಯಿಸಿದ್ದಾರೆ.

ಹಿಂದಿನ ಹಣಕಾಸು ಸಚಿವರು ದುಡ್ಡು ಎಲ್ಲಿಂದ ತರುತ್ತಾನೆ ಎಂದು ಕೇಳಿದ್ದಾರೆ. ಆದರೆ ನಾನು ಯಾರ ಹಂಗಿನಲ್ಲೂ ಇಲ್ಲ. ಸಾಲಮನ್ನಾ ಮಾಡುವುದರಿಂದ ಕಮಿಷನ್ ಕೂಡಾ ಬರಲ್ಲ. ರೈತರಿಗೆ ಒಳ್ಳೆಯದಾಗಲಿ ಎಂದು ಮಾಡುತ್ತಿದ್ದೇನೆ. ನನ್ನ ಅಧಿಕಾರವಧಿ ಬಗ್ಗೆ ಕೆಲವರು ಚರ್ಚೆ ಮಾಡ್ತಿದ್ದಾರೆ. ಅಧಿಕಾರಿಗಳೂ ಕೂಡಾ ನಮ್ಮ ಸರ್ಕಾರ ತುಂಬಾ ದಿನ ಉಳಿಯಲ್ಲ. ಹಾಗಾಗಿ ನಾವು ಹೇಳುವ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಅಗತ್ಯವಿಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಸಹಕಾರ ಬ್ಯಾಂಕ್ ಗಳ ಸಭೆಯಲ್ಲಿ ಕುಮಾರಸ್ವಾಮಿ ಖಾರವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಕೇಳಿದ್ದಕ್ಕೆ ವ್ಯಕ್ತಿಯ ಉತ್ತರ ನೋಡಿ ಪೊಲೀಸರೇ ದಂಗಾದ್ರು Video

ಬೆಕ್ಕು ಸಾಕುವುದು ಬೇಡವೆಂದ ಮನೆಯವರು, ಜೀವಕ್ಕೆ ಕುತ್ತು ತಂದುಕೊಂಡ ಎಂಬಿಬಿಎಸ್‌ ವಿದ್ಯಾರ್ಥಿನಿ

ಇಸ್ರೇಲ್ ಮೇಲೆ ಮತ್ತೇ ಇರಾನ್ ದಾಳಿ, 100ಕ್ಕೂ ಅಧಿಕ ಮಂದಿಗೆ ಗಾಯ

ದಾವಣಗೆರೆ ದಕ್ಷಿಣ ಉಪಚುನಾವಣೆ, ಗುದ್ದಾಟದ ನಡುವೆ ಕೊನೆಗೂ ಕಾಂಗ್ರೆಸ್ ಟಿಕೆಟ್ ಘೋಷಣೆ

ಮುಂದಿನ ಸುದ್ದಿ
Show comments