Webdunia - Bharat's app for daily news and videos

Install App

ಊಟಕ್ಕೆ ಗತಿಯಿಲ್ಲದೇ ಯುವಕರು ಸೇನೆ ಸೇರ್ತಾರೆ ಎಂಬ ಸಿಎಂ ಕುಮಾರಸ್ವಾಮಿ ವಿಡಿಯೋ ವೈರಲ್

Webdunia
ಶುಕ್ರವಾರ, 12 ಏಪ್ರಿಲ್ 2019 (09:14 IST)
ಬೆಂಗಳೂರು: ಒಪ್ಪೊತ್ತಿನ ಊಟಕ್ಕಾಗಿ ಜನ ಸೇನೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆನ್ನಲಾದ ವಿಡಿಯೋ ಒಂದನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದೆ.


ಆದರೆ ಈ ವಿಡಿಯೋ ಸುಳ್ಳು, ಮತ್ತು ಬಿಜೆಪಿಯವರೇ ನನ್ನ ಇಮೇಜ್ ಹಾಳು ಮಾಡಲು ಎಡಿಟ್ ಮಾಡಿ ಹರಿಯಬಿಟ್ಟಿರುವ ವಿಡಿಯೋ ಎಂದು ಸಿಎಂ ಎಚ್ ಡಿಕೆ ಆರೋಪಿಸಿದ್ದಾರೆ.

ಬಿಜೆಪಿ ತನ್ನ ಟ್ವಿಟರ್ ಪೇಜ್ ನಲ್ಲಿ ಸಿಎಂ ಕುಮಾರಸ್ವಾಮಿ ಚುನಾವಣಾ ರ್ಯಾಲಿಯೊಂದರಲ್ಲಿ ಮಾತನಾಡುವ ವಿಡಿಯೋ ಪ್ರಕಟಿಸಿದ್ದು, ಇದರಲ್ಲಿ ಸಿಎಂ ‘ಒಂದು ಹೊತ್ತಿನ ಊಟಕ್ಕೆ ಗತಿಯಿಲ್ಲ ಎಂದು ಯಾರು ಪರದಾಡುತ್ತಾರೋ ಅವರು ಹೋಗಿ ಬೇರೆ ದಾರಿಯಿಲ್ಲದೆ ಸೇನೆಗೆ ಸೇರುತ್ತಾರೆ. ಅಂತಹ ಯುವಕರ ಜೀವನದಲ್ಲಿ ಚೆಲ್ಲಾಟವಾಡುವ ಪ್ರಧಾನಿ ಇವರು’ ಎಂದು ಮೋದಿ ವಿರುದ್ಧ ಹರಿಹಾಯುತ್ತಾರೆ. ಈ ವಿಡಿಯೋ ಜತೆಗೆ ಬಿಜೆಪಿ ಮೊದಲು ನಿಮ್ಮ ಮಗನನ್ನು ಸೇನೆಗೆ ಸೇರಿಸಿ. ಆಗ ಸೇನೆಯವರ ಕಷ್ಟವೇನೆಂದು ಗೊತ್ತಾಗುತ್ತದೆ ಎಂದು ಲೇವಡಿ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments