Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪನವರಿಗೆ ಎಚ್ಚರಿಕೆ ನೀಡಿದ ಸಿಎಂ ಕುಮಾರಸ್ವಾಮಿ

Webdunia
ಗುರುವಾರ, 20 ಸೆಪ್ಟಂಬರ್ 2018 (12:52 IST)
ಬೆಂಗಳೂರು : ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಇದೀಗ ಸಿಎಂ ಕುಮಾರಸ್ವಾಮಿಯವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಅಧಿಕಾರ ತನ್ನ ಕೈಯಲ್ಲಿ ಇದೆ ಎಂಬುದಾಗಿ ಎಚ್ಚರಿಕೆ  ನೀಡಿದ್ದಾರೆ.


ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ತಮ್ಮ ಮಾತಿನ ಮೇಲೆ ಹಿಡಿತವಿಟ್ಟುಕೊಳ್ಳಬೇಕು. ಅಪ್ಪ-ಮಕ್ಕಳು ಲೂಟಿ ಕೋರರು ಅಂತಾ ಹೇಳಿಕೆ ನೀಡಿದ್ದಾರೆ. ಯಾರು ಲೂಟಿ ಕೋರರು ಎಂಬುದನ್ನು ಮೊದಲು ತೋರಿಸಬೇಕು. ಈ ಹಿಂದೆಯೂ ಸಹ ನಮ್ಮನ್ನ ಜೈಲಿಗೆ ಕಳಿಸುತ್ತೀನಿ ಎಂದು ಅವರೇ ಜೈಲಿಗೆ ಹೋಗಿದ್ದರು. ಇಂದು ಡಿ.ಕೆ ಶಿವಕುಮಾರ್‍ರನ್ನು ಜೈಲಿಗೆ ಕಳುಹಿಸುತ್ತೀವಿ ಅಂತಾ ಹೇಳಿಕೆ ನೀಡುತ್ತಾರೆ’ ಎಂದು ಬಿಎಸ್‍ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ‘ಯಡಿಯೂರಪ್ಪ ರಾಜಕೀಯದಲ್ಲಾಗಲಿ, ವಯಸ್ಸಿನಲ್ಲಾಗಲಿ ನಮಗಿಂತ ಹಿರಿಯರಾಗಿದ್ದಾರೆ. ಅವರು ಪದ ಬಳಕೆ ಮಾಡುವಾಗ ಸ್ವಲ್ಪ ಹಿಡಿತದಲ್ಲಿಟ್ಟುಕೊಳ್ಳಬೇಕು. ಪರ್ಸೆಂಟೇಜ್ ಸರ್ಕಾರವನ್ನು ತಂದವರೇ ನೀವು, ಪರ್ಸೆಂಟೇಜ್ ಪಿತಾಮಹ ಯಡಿಯೂರಪ್ಪನವರು. ಹೀಗೆ ನೀವು ನಿಮ್ಮ ಮಾತನ್ನು ಮುಂದುವರಿಸಿದರೆ ಮುಂದೆ ಸಂಕಷ್ಟ ಎದುರಿಸಬೇಕಾಗುತ್ತದೆ. ಗಾಜಿನ ಮನೆಯಲ್ಲಿ ಕೂತು ಕಲ್ಲುಹೊಡೆಯುವುದನ್ನು ಮೊದಲು ನಿಲ್ಲಿಸಿ’ ಎಂದು ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments