Webdunia - Bharat's app for daily news and videos

Install App

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನ

Webdunia
ಮಂಗಳವಾರ, 23 ಜುಲೈ 2019 (20:14 IST)
ಇಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಕುಮಾರಸ್ವಾಮಿ  ನೇತೃತ್ವದ ಸರಕಾರ ಬಹುಮತವನ್ನು ಕಳೆದುಕೊಂಡು ಪತನ ಹೊಂದಿದೆ.

ಇಂದು ವಿಶ್ವಾಸಮತ ಯಾಚನೆ ಬಯಸಿದ್ದ ಸಿಎಂ ಕುಮಾರಸ್ವಾಮಿಯವರಿಗೆ ನಿರೀಕ್ಷೆಯಂತೆಯೇ ಸೋಲಾಗಿದೆ. ಇದೀಗ ಕುಮಾರಸ್ವಾಮಿ ಸರಕಾರ ಕಳೆದ 14 ತಿಂಗಳ ಅವಧಿಯನ್ನು ಪೂರ್ಣಗೊಳಿಸಿ ವಿಶ್ವಾಸಮತದಲ್ಲಿ ಸೋಲು ಕಂಡಿದೆ. 
 
ವಿಶ್ವಾಸಮತ ನಿರ್ಣಯದ ಪರವಾಗಿ 99  ಮತಗಳು ಬಂದರೆ ವಿಶ್ವಾಸಮತದ ವಿರುದ್ಧವಾಗಿ 105 ಮತಗಳು ಬಂದವು. ಕೆಲ ದಿನಗಳಿಂದ ರಾಜ್ಯದ ಜನತೆಗೆ ಇರಿಸು ಮುರಿಸು ಉಂಟು ಮಾಡಿದ್ದ ಬೃಹನ್ನಾಟಕಕ್ಕೆ ಇಂದು ತೆರೆ ಬಿದ್ದಿದೆ. 
 
ಸಭಾಪತಿ ರಮೇಶ್ ಕುಮಾರ್ ವಿಶ್ವಾಸಮತವನ್ನು ಧ್ವನಿಮತಕ್ಕೆ ಹಾಕುವಂತೆ ಕೋರಿದರು. ಧ್ವನಿಮತದ ನಂತರ ಶಾಸಕರ ತಲೆ ಎಣಿಕೆ ನಡೆಯಿತು. ಕಾಂಗ್ರೆಸ್- ಜೆಡಿಎಸ್ ಪರವಾಗಿ ಸದನದಲ್ಲಿ 99 ಶಾಸಕರು ಉಪಸ್ಥಿತರಿದ್ದರೆ ಬಿಜೆಪಿಯ 105 ಶಾಸಕರು ಹಾಜರಿದ್ದರು. 
 
ಸಿಎಂ ಕುಮಾರಸ್ವಾಮಿ ಸರಕಾರ ಪತನವಾಗಿದ್ದರಿಂದ ಬಿಜೆಪಿ ನೇತೃತ್ವದ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಸುಲಭವಾಗಿ ಅಧಿಕಾರದ ಗದ್ದುಗೆ ಏರಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments