Select Your Language

Notifications

webdunia
webdunia
webdunia
webdunia

ಸದ್ದಿಲ್ಲದೆ ಯುವರಾಜನನ್ನು ಭೇಟಿ ಮಾಡಿದ ಸಿಎಂ ಸಿದ್ದು

ಸದ್ದಿಲ್ಲದೆ ಯುವರಾಜನನ್ನು ಭೇಟಿ ಮಾಡಿದ ಸಿಎಂ ಸಿದ್ದು
ನವದೆಹಲಿ , ಶುಕ್ರವಾರ, 22 ಮೇ 2015 (18:11 IST)
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಮುನ್ಸೂಚನೆಗಳಿಲ್ಲದೆ ತಮ್ಮ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಇಂದು ಇದ್ದಕ್ಕಿದ್ದಂತೆ ಭೇಟಿ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 
 
ಹೌದು, ಸಿಎಂ ಸಿದ್ದರಾಮಯ್ಯ ಅವರು ಇಂದು ಯಾವುದೇ ಮುನ್ಸೂಚನೆ ಹರಿಬಿಡದೆ ರಾಷ್ಟ್ರ ರಾಜಧಾನಿ ದೆಹಲಿ ತಪಿದ್ದಾರೆ. ಅಷ್ಟಾಗಿದ್ದರೆ ಪರವಾಗಿರಲಿಲ್ಲ, ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ನವದೆಹಲಿಯ ತುಘಲಕ್ ಲೇನ್ ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. 
 
ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಸಿದ್ದರಾಮಯ್ಯ ದೆಹಲಿ ತಲುಪಿದ್ದಾರೆ ಎನ್ನಲಾಗುತ್ತಿದೆ. ಆದರೆ ಮಾಧ್ಯಮಗಳೆದುರು ಅವರೇ ಬಾಯ್ಬಿಟ್ಟಲ್ಲಿ ಸತ್ಯಾಂಶ ಏನೆಂದು ತಿಳಿಯಲಿದೆ. 
 
ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಮೇ 29 ಮತ್ತು ಜೂನ್ 2ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. 
 

Share this Story:

Follow Webdunia kannada