ಪ್ರತಿ ಶನಿವಾರ ಸಿಎಂ-MLAಗಳ ಭೇಟಿ

Webdunia
ಸೋಮವಾರ, 25 ಸೆಪ್ಟಂಬರ್ 2023 (16:20 IST)
ಕಾಂಗ್ರೆಸ್ ಆಡಳಿತ ಶುರುಮಾಡಿದಾಗಿನಿಂದಲೂ ಪಕ್ಷದೊಳಗೆ ಒಂದಿಲ್ಲೊಂದು ಭಿನ್ನಮತ ಸ್ಫೋಟಿಸುತ್ತಲೆ ಇದೆ. ಇತ್ತೀಚೆಗೆ ಶಾಸಕರು, ಸಚಿವರ ನಡುವಿನ ಪತ್ರ ಸಮರ ಜೋರಾಗಿದ್ದು, ಇದನ್ನೆಲ್ಲಾ ಸರಿಪಡಿಸಲು ಖುದ್ದು ಸಿಎಂ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಶಾಸಕರ ಅಹವಾಲುಗಳಿಗೆ ಸ್ಪಂದಿಸಲು ಸಿದ್ದರಾಗಿರುವ ಸಿಎಂ ಸಿದ್ದರಾಮಯ್ಯ, ವಾರಕ್ಕೊಂದು ದಿನ ಶಾಸಕರ ಭೇಟಿ ಕಾರ್ಯಕ್ರಮ ರೂಪಿಸಿಕೊಂಡಿದ್ದಾರೆ. ಅದರಂತೆ ನಿನ್ನೆಯಿಂದ ಸಿಎಂ ಶಾಸಕರ ಭೇಟಿ ಕಾರ್ಯಕ್ರಮ ಆರಂಭಗೊಂಡಿದ್ದು, ಪ್ರತಿ ಶನಿವಾರದಂದು ಶಾಸಕರ ಭೇಟಿಗೆ ಸಿದ್ದರಾಮಯ್ಯ ಸಮಯ ನಿಗದಿ ಮಾಡಿದ್ದಾರೆ. ಪಕ್ಷಾತೀತವಾಗಿ ಶಾಸಕರ ಅಹವಾಲು ಬೇಡಿಕೆ ಕೇಳಲು ಸಿದ್ದರಾದ ಸಿಎಂ, ಗೃಹಕಚೇರಿ ಕೃಷ್ಣಾದಲ್ಲಿ ಶಾಸಕರ ಭೇಟಿಗೆ ಸಮಯಾವಕಾಶ ನೀಡಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 12 ರವರೆಗೆ ಭೇಟಿಗೆ ಅವಕಾಶ ನೀಡಿದ್ದಾರೆ. ಇನ್ನು, ಶನಿವಾರ ಸಾಧ್ಯವಾಗದಿದ್ರೆ ಮತ್ತೊಂದು ದಿನ ಭೇಟಿಗೂ ಅವಕಾಶ ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments