Select Your Language

Notifications

webdunia
webdunia
webdunia
webdunia

ಕೆ.ಜೆ.ಜಾರ್ಜ್ ರಾಜೀನಾಮೆ ಪಡೆದರೆ ಪ್ರಪಂಚವೇನು ಮುಳಗಲ್ಲ: ಬಸವರಾಜ ಹೊರಟ್ಟಿ

ಕೆ.ಜೆ.ಜಾರ್ಜ್
ಬೆಂಗಳೂರು , ಸೋಮವಾರ, 18 ಜುಲೈ 2016 (12:33 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ರಕ್ಷಣೆ ಮಾಡುವುದನ್ನು ಕೂಡಲೇ ಬಿಡಬೇಕು. ಅವರನ್ನು ಸಂಪುಟದಿಂದ ಕೈಬಿಟ್ಟರೆ ಪ್ರಪಂಚವೇನು ಮುಳಗಲ್ಲ ಎಂದು ಜೆಡಿಎಸ್ ಎಂಎಲ್‌ಸಿ ಬಸವರಾಜ ಹೊರಟ್ಟಿ ರಾಜ್ಯ ಸರಕಾರಕ್ಕೆ ಟಾಂಗ್ ನೀಡಿದ್ದಾರೆ.
 
ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಎಂಎಲ್‌ಸಿ ಬಸವರಾಜ ಹೊರಟ್ಟಿ, ರಾಜ್ಯದಲ್ಲಿ ಸಚಿವರಿಗೆ ಒಂದು ಕಾನೂನು ಜನಸಾಮಾನ್ಯರಿಗೆ ಒಂದು ಕಾನೂನು. ಸದನದಲ್ಲಿ ಕುಳಿತಿರುವ ನಮ್ಮೆಲರಿಗೂ ಹೆಚ್ಚಿನ ಜವಾಬ್ದಾರಿ ಇದೆ. ಮೊದಲು ವಿವಾದಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಹೇಳಿದರು.
 
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಜಾರ್ಜ್ ಅವರನ್ನು ಸಂಪುಟದಿಂದ ಕೈಬಿಡುವುದರಿಂದ ಪ್ರಪಂಚವೇ ಮುಳಗಲ್ಲ ಎಂದು ರಾಜ್ಯ ಸರಕಾರಕ್ಕೆ ನೇರವಾಗಿ ಟಾಂಗ್ ನೀಡಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಪಕ್ಷ ನಾಯಕರ ಸಭೆ ಕರೆಯಬೇಕು ಪ್ರಕರಣ ಕುರಿತಂತೆ ಕಲಾಪದಲ್ಲಿ ಕೋಲಾಹಲ ಸೃಷ್ಠಿಸುವುದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಎಂಎಲ್‌ಸಿ ಬಸವರಾಜ ಹೊರಟ್ಟಿ ರಾಜ್ಯ ಸರಕಾರವನ್ನು ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: 145 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ