Select Your Language

Notifications

webdunia
webdunia
webdunia
webdunia

ಬಿಎಸ್‌ವೈಗೆ ಮೀಟರ್ ಇಲ್ಲ ಎಂದು ಸಿಎಂ ಹೇಳಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬಿಎಸ್‌ವೈಗೆ ಮೀಟರ್ ಇಲ್ಲ ಎಂದು ಸಿಎಂ ಹೇಳಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಂಗಳೂರು , ಮಂಗಳವಾರ, 26 ಸೆಪ್ಟಂಬರ್ 2017 (18:11 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೀಟರ್ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಯರ್ ಸ್ಥಾನಕ್ಕೆ ಆರು ಜನ ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ನನ್ನ ಮತ್ತು ಸಚಿವ ರಾಮಲಿಂಗಾರೆಡ್ಡಿ ಬೆಂಬಲಿಗರು ಆಕಾಂಕ್ಷಿಗಳಿರುವುದು ನಿಜ. ಆದರೆ, ಪಕ್ಷದ ತೀರ್ಮಾನವೇ ಅಂತಿಮವಾಗಿದೆ ಎಂದು ತಿಳಿಸಿದ್ದಾರೆ.  
 
ಮೇಯರ್ ಮತ್ತು ಉಪಮೇಯರ್ ಚುನಾವಣೆ ಕುರಿತಂತೆ ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇವೆ. ನಾಳೆ ಬೆಂಗಳೂರು ಶಾಸಕರ, ಸಂಸದರ ಸಭೆ ನಿಗದಿಯಾಗಿದೆ. ಶೀಘ್ರವೇ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.
 
 ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮತ್ತೊಂದು ಅವಧಿಗೆ ಮುಂದುವರಿಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರತ್ನಖಚಿತ ಸಿಂಹಾಸನ ಸಾರ್ವಜನಿಕ ವೀಕ್ಷಣೆಗೆ ಮುಕ್ತ