ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

Krishnaveni K
ಶುಕ್ರವಾರ, 22 ಆಗಸ್ಟ್ 2025 (15:33 IST)
ಬೆಂಗಳೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಚಾಲನೆ ನೀಡಲಿದ್ದಾರೆ ಎಂಬ ವರದಿಗಳ ಬಗ್ಗೆ ಈಗ ಸ್ವತಃ ಸಿಎಂ ಕಚೇರಿಯಿಂದಲೇ ಸ್ಪಷ್ಟನೆ ಬಂದಿದೆ.

ಸಿಎಂ ಸಿದ್ದರಾಮಯ್ಯನವರೇ ಸೋನಿಯಾ ಗಾಂಧಿಗೆ ದಸರಾ ಉದ್ಘಾಟನೆಗೆ ಆಗಮಿಸುವಂತೆ ಪತ್ರ ಬರೆದಿದ್ದಾರೆ. ಆದರೆ ಸೋನಿಯಾ ಇದಕ್ಕೆ ಉತ್ತರಿಸಿಲ್ಲ. ಹೀಗಾಗಿ ಸ್ವತಃ ಸಿಎಂ ಅವರೇ ದೆಹಲಿಗೆ ತೆರಳಿ ಆಹ್ವಾನ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು.

ಇದರ ಬೆನ್ನಲ್ಲೇ ಹಲವರು ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರು. ದಸರಾ ಎನ್ನುವುದು ನಮ್ಮ ಕನ್ನಡ ನಾಡಿನ ಸಂಸ್ಕೃತಿ ಪ್ರತೀಕ. ಈ ಕಾರ್ಯಕ್ರಮಕ್ಕೆ ನಮ್ಮದೇ ನಾಡಿನ ಗಣ್ಯರನ್ನು ಕರೆಸುವುದು ಬಿಟ್ಟು ರಾಜಕೀಯ ಯಾಕೆ ಬೆರೆಸುತ್ತೀರಿ ಎಂದು ಜನರಿಂದ ಟೀಕೆ ಕೇಳಿಬಂದಿತ್ತು.

ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಕಚೇರಿ ಈಗ ಸ್ಪಷ್ಟನೆ ನೀಡಿದೆ. ದಸರಾಗೆ ಸೋನಿಯಾ ಗಾಂಧಿ ಚಾಲನೆ ನೀಡಲಿದ್ದಾರೆ ಎನ್ನುವುದು ಕಾಲ್ಪನಿಕ ಮತ್ತು ಸತ್ಯಕ್ಕೆ ದೂರವಾದ ಸುದ್ದಿ.  ಆ ರೀತಿಯ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments