Select Your Language

Notifications

webdunia
webdunia
webdunia
webdunia

ಭುವನೇಶ್ವರಿಗೆ ಸಿಎಂ ಪುಷ್ಪ ನಮನ

ಭುವನೇಶ್ವರಿಗೆ ಸಿಎಂ ಪುಷ್ಪ ನಮನ
bangalore , ಮಂಗಳವಾರ, 1 ನವೆಂಬರ್ 2022 (16:12 IST)
ಪ್ರತಿ ವರ್ಷದಂತೆ ನವೆಂಬರ್ 1ರಂದು ಪ್ರಪಂಚದಾದ್ಯಂತ ಇರುವ ಕನ್ನಡಿಗರೆಲ್ಲರು ಸಂಭ್ರಮಿಸುವ ದಿನ. 1956 ನವೆಂಬರ್ 1ರಂದು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವಾಗಿ ಘೋಷಣೆ ಮಾಡಲಾಯಿತು. ಮೈಸೂರು ರಾಜ್ಯವಾಗಿ ಘೋಷಣೆಯಾದ ಈ ಪರ್ವದಿಂದ ಸಂಕೇತವಾಗಿ ಅಂದಿನಿಂದ ಕನ್ನಡಿಗರೆಲ್ಲರೂ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಸಿಎಂ ಬಸವರಾಜ್​​​ ಬೊಮ್ಮಾಯಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ  ಬಸವರಾಜ ಹೊರಟ್ಟಿ, ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್,  ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೊರ್ಬಿ ದುರಂತಕ್ಕೆ C.T ರವಿ ಸಂತಾಪ