ರೆಡ್ಡಿ ವಿರುದ್ಧ ಸಿಎಂ ಮಾಸ್ಟರ್ ಪ್ಲಾನ್: ಮತ್ತೆ ಜೈಲು ಪಾಲಾಗ್ತಾರ ಗಾಲಿ ಜನಾರ್ದನ ರೆಡ್ಡಿ?

Webdunia
ಮಂಗಳವಾರ, 7 ನವೆಂಬರ್ 2017 (09:48 IST)
ಬೆಂಗಳೂರು: ಅಕ್ರಮ ಗಣಿಗಾರಿಕೆಯ ಹಳೆ ಪ್ರಕರಣಗಳಿಗೆ ರಾಜ್ಯ ಸರ್ಕಾರ ಮರುಜೀವ ನೀಡುತ್ತಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಬಳಸಿಕೊಳ್ಳಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ಯ ಎನ್ನುವ ಪ್ರಶ್ನೆ ಮೂಡಿದೆ.

ಸಿಎಂ ಸೂಚನೆಯಂತೆ ಸಂಪುಟ ಉಪ ಸಮಿತಿ ಸಭೆ ನಡೆಸಿದ ಸಚಿವ ಹೆಚ್.ಕೆ.ಪಾಟೀಲ್, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಶೇಷ ಆಸಕ್ತಿ ತೋರಿದ್ದಾರೆ. ಈಗಾಗಲೇ ಗಾಲಿ ಜನಾರ್ದನ ರೆಡ್ಡಿ ಗದಗ ಜಿಲ್ಲೆಯ 7 ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ರೆಡ್ಡಿಯನ್ನ ಮಟ್ಟಹಾಕಲು ಹೆಚ್.ಕೆ.ಪಾಟೀಲ್ ಮುಂದಾಗಿದ್ದಾರೆ. ಸಂಪುಟ ಉಪ-ಸಮಿತಿಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಗೆ ಕಳುಹಿಸಿ ಕೊಡಲಿದ್ದಾರೆ. ಇದನ್ನು ಸಂಪುಟ ಸಭೆಯಲ್ಲಿ ಉಪ ಸಮಿತಿ ಶಿಫಾರಸ್ಸು ಅಂಗೀಕರಿಸುವ ಸಾಧ್ಯತೆಯಿದೆ.

ನಂತರ ಈ ನಿರ್ಣಯವನ್ನು ಗೃಹ ಇಲಾಖೆಗೆ ರವಾನೆ ಮಾಡಲಾಗುತ್ತದೆ. ಇತ್ತೀಚೆಗಷ್ಟೇ ಜನಾರ್ದನ ರೆಡ್ಡಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ ರಿಲೀಸ್ ಮಾಡಿತ್ತು. ಹೀಗಾಗಿ ರೆಡ್ಡಿ ಮುಂದಿನ ಚುನಾವಣೆಯಲ್ಲಿ ತಮ್ಮ ಆಸ್ತಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಗೃಹ ಇಲಾಖೆಯಿಂದ ಹೊಸ ವಿಶೇಷ ತನಿಖಾ ತಂಡ ರಚಿಸಿ, ರೆಡ್ಡಿ ವಿರುದ್ಧ ಹೊಸ ಎಫ್ಐಆರ್ ದಾಖಲು ಮಾಡಿ, ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಚಿಂತನೆ ನಡೆಸುತ್ತಿದೆ.

ಗುಪ್ತಚರ ಇಲಾಖೆಗೆ ಈಗಾಗಲೇ ಕೆಲ ಸೂಚನೆ ನೀಡಿರುವ ಸಿಎಂ ಸಿದ್ಧರಾಮಯ್ಯ, ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗುವವರೆಗೂ ಅವರ ಚಲನವಲನದ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ರೆಡ್ಡಿ ಹಣವನ್ನಿ ಚುನಾವಣೆಗೆ ಬಳಸಿಕೊಳ್ಳಬಹುದು ಎಂಬುದನ್ನು ಅರಿತಿರುವ ಸಿಎಂ, ಮುಂದಿನ ಚುನಾವಣೆ ಘೋಷಣೆಯಾಗುವುದರೊಳಗೆ ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments