Webdunia - Bharat's app for daily news and videos

Install App

ಸಿಎಂ ಪ್ರೀತಿ ಪಾತ್ರರಿಂದಲೇ ಶರತ್ ಮಡಿವಾಳ ಹತ್ಯೆ ಮಾಡಿದ್ದು: ಪ್ರತಾಪ್ ಸಿಂಹ

Webdunia
ಗುರುವಾರ, 13 ಜುಲೈ 2017 (12:47 IST)
ಸಿಎಂ ಸಿದ್ದರಾಮಯ್ಯ ಪ್ರೀತಿ ಪಾತ್ರರೇ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಮಾಡಿದ್ದು ಎಂದು ಸಂಸದ ಪ್ರತಾಪ್ ಸಿಂಹ್ ಗಂಭೀರ ಆರೋಪ ಮಾಡಿದ್ದಾರೆ.
 
ಸ್ವಚ್ಚತಾ ಅಭಿಯಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಮಡಿವಾಳ ನಮ್ಮ ಕಾರ್ಯಕರ್ತ. ಆತನನ್ನು ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಿ ಶಾಂತಿವ್ಯವಸ್ಥೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಹಿಂದು ಸಂಘಟನೆಗಳಿಗೆ ಮಾತ್ರ ಎಚ್ಚರಿಕೆ ನೀಡುತ್ತಾರೆ. ಮುಸ್ಲಿಂ ಸಂಘಟನೆಗಳಿಗೆ ಯಾಕೆ ಎಚ್ಚರಿಕೆ ನೀಡುವುದಿಲ್ಲ? ವೋಟ್ ಬ್ಯಾಂಕ್‌ ಕಳೆದುಹೋಗುತ್ತದೆ ಎನ್ನುವ ಆತಂಕ ಕಾಡುತ್ತಿದೆಯಾ ಎಂದು ಲೇವಡಿ ಮಾಡಿದ್ದಾರೆ.
 
ಮುಂದಿನ 10 ತಿಂಗಳ ಅವಧಿಯಲ್ಲಾದರೂ ಕರ್ನಾಟಕದ ಸಿಎಂ ಎನ್ನುವಂತೆ ಕಾರ್ಯನಿರ್ವಹಿಸಿ, ಒಳ್ಳೆಯ ಅಡಳಿತ ನಡೆಸಿ ಕಾನೂನು ವ್ಯವಸ್ಥೆಗೆ ಚುರುಕು ಮುಟ್ಟಿಸಿ. ಇಲ್ಲವಾದಲ್ಲಿ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ್ ವಾಗ್ದಾಳಿ ನಡೆಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments