ರಾಜಣ್ಣ-ಡಿಕೆಶಿ ಮಾತಿನ ಯುದ್ಧಗೆ ಸಿಎಂ ಎಂಟ್ರಿ: ಹೈಕಮಾಂಡ್‌ನತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ

Sampriya
ಮಂಗಳವಾರ, 18 ಫೆಬ್ರವರಿ 2025 (17:29 IST)
ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ  ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ವಾಕ್ಸಮರ ಜೋರಾಗಿದೆ. ಇದೀಗ ಇಬ್ಬರು ನಾಯಕರ ವಾಕ್ಸಮರದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಒಳಜಗಳ ಜೋರಾಗಿದೆ. ಒಂದೆಡೆ ಸಿಎಂ ಬದಲಾವಣೆ ಕೂಗು ಎದ್ದಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಆಗ್ರಹ ಕೇಳಿ ಬಂದಿದೆ. ಇದರ ನಡುವೆ ರಾಜಣ್ಣ ಮತ್ತು ಶಿವಕುಮಾರ್ ನಡುವೆ ಮಾತಿನ ಯುದ್ಧ ತಾರಕ್ಕೇರಿತ್ತು.

ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಎಲ್ಲರಿಗೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತಾಡೋಕೆ ಹೋಗೊಲ್ಲ. ಹೈಕಮಾಂಡ್ ಅಂತಿಮವಾಗಿ ತೀರ್ಮಾನ ಮಾಡಲಿದೆ. ಹೈಕಮಾಂಡ್ ತೀರ್ಮಾನಕ್ಕೆ‌ ನಾನು ಬದ್ಧ. ನನ್ನನ್ನು ಸೇರಿದಂತೆ ಎಲ್ಲರೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸೂತ್ರದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಷ್ಟು ಸಲ ಹೇಳಬೇಕು ಅದನ್ನುಎಂದು ಕೋಪಗೊಂಡರು. ಅದು ಹೈಕಮಾಂಡ್ ಮಾಡುವ ವಿಚಾರ. ಅವರು ಮಾಡುತ್ತಾರೆ, ಅದನ್ನು ಪಾಲಿಸುತ್ತೇವೆ. ಹೈಕಮಾಂಡ್ ತೀರ್ಮಾನ ಎಲ್ಲರಿಗೂ ಅನ್ವಯ ಎಂದರು.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರೇಗಾ ಯೋಜನೆಯ ಹೆಸರು ಬದಲಾವಣೆಗೆ ಹೊಸ ಮಸೂದೆ: ರಾಜಕೀಯ ಸಂಘರ್ಷಕ್ಕೆ ವೇದಿಕೆ ಸಜ್ಜು

ಈ ಕಾರಣಕ್ಕೆ ಅಧಿವೇಶನ ಮುಂದುವರಿಸಲು ಸ್ಪೀಕರ್ ಗೆ ಪತ್ರ ಬರೆದ ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments