Webdunia - Bharat's app for daily news and videos

Install App

ಬಜೆಟ್‌ ನಲ್ಲಿ ಸಿಎಂ ಭರವಸೆ!

geetha
ಶುಕ್ರವಾರ, 16 ಫೆಬ್ರವರಿ 2024 (19:02 IST)
ಬೆಂಗಳೂರು :ಕರ್ನಾಟಕ ಬಜೆಟ್‌ 2024 ರಲ್ಲಿ ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.   ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಸತಿ ಕ್ಷೇತ್ರಕ್ಕೆ ಪ್ರಸಕ್ತ ಬಜೆಟ್‌ ನಲ್ಲಿ ನೀಡಲಾಗಿರುವ ಕೊಡುಗೆಗಳು ಹೀಗಿವೆ 
 
2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ . ವಸತಿರಹಿತರ ಸಂಖ್ಯೆಯನ್ನು ಗುರುತಿಸಲು  ಸಮೀಕ್ಷೆ . 
 
ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಾಣ.   ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು  ಸರ್ಕಾರದ ತೀರ್ಮಾನ.  ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರ.
 
ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮ
 
Asset Monetisation, ವಸತಿ ಸೆಸ್‌ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪನೆ. 
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ 
ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜನೆ
ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರವು ರಿಯಲ್‌ ಎಸ್ಟೇಟ್‌ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ   ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ  
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments