Webdunia - Bharat's app for daily news and videos

Install App

ಸೋಶಿಯಲ್ ಮಿಡಿಯಾದಲ್ಲಿ ನಿಖಿಲ್ ಬಗ್ಗೆ ಅಪಪ್ರಚಾರ ಮಾಡುತ್ತಿರುವವರು ಮತದಾರರೇ ಅಲ್ಲ ಎಂದ ಸಿಎಂ

Webdunia
ಬುಧವಾರ, 13 ಮಾರ್ಚ್ 2019 (07:06 IST)
ಬೆಂಗಳೂರು : ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ವಲಯಗಳಲ್ಲಿ ಬಾರೀ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಗರಂ ಆದ ಸಿಎಂ ಕುಮಾರಸ್ವಾಮಿ ಅವರು, “ಸೋಶಿಯಲ್ ಮಿಡಿಯಾದಲ್ಲಿ ನಿಖಿಲ್ ಬಗ್ಗೆ ಅಪಪ್ರಚಾರ ಮಾಡುತ್ತಿರುವವರು ಮತದಾರರೇ ಅಲ್ಲ, ಮಾಧ್ಯಮದವರ ಟೀಕೆಗೂ ನಾನು ಅಂಜುವುದಿಲ್ಲ” ಎಂದು ಕಿಡಿಕಾರಿದ್ದಾರೆ.


ಪಕ್ಷದ ವರಿಷ್ಠ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಾಮಾಜಿಕ ಜಾಲತಾಣ ಅಥವಾ ಮಾಧ್ಯಮ ವರದಿಗಳನ್ನು ನೋಡಿ ಹಳ್ಳಿ ಜನ ವೋಟ್‌ ಹಾಕಲ್ಲ. ತಮಗಾಗಿ ದುಡಿಮೆ ಮಾಡುವ, ಚಾಕರಿ ಮಾಡುವರನ್ನು ಮಂಡ್ಯದ ಜನ ಅಷ್ಟು ಸುಲಭವಾಗಿ ಕೈಬಿಡುವುದಿಲ್ಲ. ಯಾರಾರ‍ಯರ ಕೊಡುಗೆ ಏನೇನಿದೆ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ’ ಎಂದು ಹೇಳಿದ್ದಾರೆ.


‘ನಿಖಿಲ್‌ ಹೊರಗಿನವರು ಎಂದು ಸ್ಥಳೀಯರು ಗುಲ್ಲೆಬ್ಬಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಡಿ.ವಿ. ಸದಾನಂದಗೌಡರು ಬೆಂಗಳೂರು ಉತ್ತರದಲ್ಲಿ ಎಂಪಿ ಆಗಿಲ್ಲವೇ? ಯಡಿಯೂರಪ್ಪ ಮಂಡ್ಯದಲ್ಲಿ ಹುಟ್ಟಿ ಶಿವಮೊಗ್ಗದಲ್ಲಿ ರಾಜಕಾರಣ ಮಾಡುತ್ತಿಲ್ಲವೇ? ನಾನು ಹಾಸನದಲ್ಲಿ ಹುಟ್ಟಿ ರಾಮನಗರದಿಂದ ಗೆದ್ದಿಲ್ಲವೇ? ಯಾರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಆದರೆ, ನಿಖಿಲ್‌ ವಿಚಾರದಲ್ಲಿ ವ್ಯವಸ್ಥಿತವಾಗಿ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments