Webdunia - Bharat's app for daily news and videos

Install App

ಸಾಲಮನ್ನಾಗೂ ಅಭಿವೃದ್ಧಿಗೂ ಸಂಬಂಧವಿಲ್ಲ ಎಂದ ಸಿಎಂ

Webdunia
ಸೋಮವಾರ, 15 ಅಕ್ಟೋಬರ್ 2018 (12:23 IST)
ರಾಜ್ಯ ಸರಕಾರ ರೈತರಲ್ಲಿ ನೆಮ್ಮದಿ ತರಲು  ಸಾಲಮನ್ನಾ ಯೋಜನೆ ಜಾರಿಗೆ ತಂದಿದೆ. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಸಿಎಂ ಹೇಳಿದ್ದಾರೆ.

ಸರಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣವಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಸಾಲ ಮನ್ನಾದಿಂದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕೊರತೆಯಾಗಿದೆ ಎಂಬುದು ಕೇವಲ ಮಿಥ್ಯ. ರಾಜ್ಯ ಸರಕಾರದ ಚಾಲ್ತಿ ಖಾತೆಯಲ್ಲಿ 10 ಸಾವಿರ ಕೋಟಿ ರೂ.ಗಳಿಗೂ ಮಿಕ್ಕಿ ಮೊತ್ತವಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು,  ಬ್ಯಾಂಕ್ ಗಳು ರೈತರ ಸಾಲ ವಸೂಲಾತಿ ನೆಪದಲ್ಲಿ ಅವರಿಗೆ ನೋಟೀಸ್ ಜಾರಿ ಮಾಡಿ ಭಯ ಹುಟ್ಟಿಸಿದರೆ ಸಹಿಸಲಾಗದು ಎಂದು ಹೇಳಿದರು.

ಮಂಗಳೂರು ಅಭಿವೃದ್ದಿಗೆ ರಾಜ್ಯ ಸರಕಾರ ಎಲ್ಲ ನೆರವು ನೀಡಲಿದೆ. ಆದರೆ, ಕೈಗಾರಿಕೆ ಹೆಸರಿನಲ್ಲಿ ಪ್ರಕೃತಿಯ ಮೇಲೆ ಹಾನಿಯಾಗುವ ಯೋಜನೆ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. 

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಬಿ.ಎಂ. ಫಾರೂಖ್,  ಮಾಜಿ ಸಚಿವ ರಮಾನಾಥ ರೈ,  ಮೇಯರ್ ಭಾಸ್ಕರ್, ಮಾಜಿ ಶಾಸಕರಾದ ಮೊಹಿದೀನ್ ಬಾವಾ, ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ಯೋಗೀಶ್ ಭಟ್  ಮತ್ತಿತರರು ಉಪಸ್ಥಿತರಿದ್ದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments