Select Your Language

Notifications

webdunia
webdunia
webdunia
webdunia

ಈ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ ಡೌನ್ ಬೇಡ ಎಂದು ಸಿಎಂ ಹೇಳಿದ್ಯಾಕೆ?

ಈ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ ಡೌನ್ ಬೇಡ ಎಂದು ಸಿಎಂ ಹೇಳಿದ್ಯಾಕೆ?
ಹಾಸನ , ಸೋಮವಾರ, 13 ಜುಲೈ 2020 (21:27 IST)
ರಾಜ್ಯದ ಈ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾರಿ ಮಾಡುವುದು ಬೇಡ ಎಂದು ಸಿಎಂ ಹೇಳಿದ್ದಾರೆ.

ಹಾಸನ ಜಿಲ್ಲೆಯಲ್ಲಿ ದಿನನಿತ್ಯ ಬಹುತೇಕ ಭಾಗಶಃ ಲಾಕ್‍ಡೌನ್ ಆಗುತ್ತಿರುವ ಕಾರಣದಿಂದ ಸದ್ಯಕ್ಕೆ ಸಂಪೂರ್ಣ ಲಾಕ್‍ಡೌನ್ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. 

ವಿವಿಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ  ಮಾಹಿತಿ ಪಡೆದ ಮುಖ್ಯಮಂತ್ರಿ, ಈ ವಾರದ ಪರಿಸ್ಥಿತಿ ನೋಡಿಕೊಂಡು ನಂತರವಷ್ಟೇ ಹಾಸನದಲ್ಲಿ ಸಂಪೂರ್ಣ ಲಾಕ್‍ಡೌನ್ ಬಗ್ಗೆ ನಿರ್ಧರಿಸಬಹುದು ಎಂದಿದ್ದಾರೆ.

ಕೊರೊನಾ ವೈರಸ್ ವಿಚಾರದಲ್ಲಿ ಯಾವುದೇ ಜಿಲ್ಲೆಯ ಅಧಿಕಾರಿ ಮೈಮರೆಯಬಾರದು. ಆಯಾ ಜಿಲ್ಲೆಯ ಸುರಕ್ಷತೆಯ ಸಲುವಾಗಿ ಅಗತ್ಯವಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ. ಹಾಗಾಗಿ ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕುಡುಕರಿಗೆ ಬ್ಯಾಡ್ ನ್ಯೂಸ್ : ಬಾರ್ ಬಂದ್