Select Your Language

Notifications

webdunia
webdunia
webdunia
webdunia

ದೆಹಲಿ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು

ದೆಹಲಿ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು
bangalore , ಸೋಮವಾರ, 15 ಮೇ 2023 (16:46 IST)
ಕಾಂಗ್ರೆಸ್​​ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೂ ಸಹ ಸಿಎಂ ಆಯ್ಕೆ ಫೈನಲ್​ ಆಗಿಲ್ಲ.. ಕಾಂಗ್ರೆಸ್​​​​​​​ ಸರ್ಕಾರ ರಚನೆಗೆ ಸಿಎಂ ಆಯ್ಕೆ ತೊಡಕಾಗಿ ಪರಿಣಮಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K. ಶಿವಕುಮಾರ್​​​​ ನಡುವೆ ಸಿಎಂ ಗಾದಿಗಾಗಿ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಹೊಸ ಸಿಎಂ ಪದಗ್ರಹಣ ವಿಳಂಬವಾಗ್ತಿದೆ.. ನಿನ್ನೆ ಮಧ್ಯರಾತ್ರಿವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. AICC ವೀಕ್ಷಕರು ಶಾಸಕರ ಅಭಿಪ್ರಾಯವನ್ನ AICC ಅಧ್ಯಕ್ಷ ಮಲ್ಲಿಕಾರ್ಜುನ್​​​​ ಖರ್ಗೆಗೆ ರವಾನಿಸಿದ್ದಾರೆ. ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕಾಂಗ್ರೆಸ್​​ ನಾಯಕರಾದ ರಾಹುಲ್​ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಶಾಸಕರ ಅಭಿಪ್ರಾಯವನ್ನು ತಿಳಿಸಲಿದ್ದಾರೆ. ಶಾಸಕರ ಅಭಿಪ್ರಾಯ ಪರಿಗಣಿಸಿ, ಕಾಂಗ್ರೆಸ್​​ ಹೈಕಮಾಂಡ್​​​ ಇಂದು ಅಥವಾ ನಾಳೆ ಸಿಎಂ ಹೆಸರು ಘೋಷಣೆ ಮಾಡಲಿದ್ದಾರೆ. ಗುರುವಾರ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ ಇದೆ. ಸಿಎಂ ಜೊತೆ 12-15 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲವನ್ನೂ ಹೈಕಮಾಂಡ್​ ನಿರ್ಧರಿಸುತ್ತೆ