Webdunia - Bharat's app for daily news and videos

Install App

ಸಿಎಂ ಜನತಾ ದರ್ಶನದಲ್ಲಿ ಇವನ್ನು ತರಲೇಬೇಕು..!

Webdunia
ಶುಕ್ರವಾರ, 21 ಜೂನ್ 2019 (15:03 IST)
ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು  ಜೂನ್ 22 ರಂದು ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಮನವಿ ಇವನ್ನೂ ತರಬೇಕು. ಹೀಗಂತ ಡಿಸಿ ಸೂಚನೆ ನೀಡಿದ್ದಾರೆ.

ಸಿಎಂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಿನ್ನಲೆಯಲ್ಲಿ ಹೆರೂರು (ಬಿ) ಗ್ರಾಮದ ಹುಲಿಕಂಠೇಶ್ವರ ದೇವಸ್ಥಾನದ ಹತ್ತಿರದ ಆವರಣದಲ್ಲಿ ಜೂನ್ 22 ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿಗಳನ್ನು ಸ್ವೀಕರಿಸುವರು.

ಮನವಿ ಸಲ್ಲಿಸುವ ಸಾರ್ವಜನಿಕರು ಅರ್ಜಿಯೊಂದಿಗೆ ಆಧಾರ ಕಾರ್ಡ್ ಅಥವಾ ಯಾವುದಾದರೂ ವಿಳಾಸ ದೃಢೀಕರಿಸುವ ಗುರುತಿನ ಚೀಟಿಯನ್ನು ಸಲ್ಲಿಸಬೇಕು.  ಮೊಬೈಲ್ ನಂಬರ್‍ನ್ನು ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಆರ್ ವೆಂಕಟೇಶಕುಮಾರ ತಿಳಿಸಿದ್ದಾರೆ.

ಜನತಾ ದರ್ಶನದಲ್ಲಿ ಮುಖ್ಯಮಂತ್ರಿಗಳಿಗೆ ಮನವಿಗಳನ್ನು ಸಲ್ಲಿಸಲು ಆಗಮಿಸುವ ಸಾರ್ವಜನಿಕರು ಅರ್ಜಿಯೊಂದಿಗೆ ಪೂರಕ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ  ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ಪ್ರತಿ ಅರ್ಜಿದಾರರಿಗೆ ಟೋನ್ ಸಂಖ್ಯೆಯನ್ನು ನೀಡಲಾಗುವುದು. ಸದರಿ ಸಂಖ್ಯೆಯನ್ನಾಧರಿಸಿ ಅರ್ಜಿಗಳ ಸ್ಥಿತಿಗತಿಯನ್ನು ಅರ್ಜಿದಾರರು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

ಮುಂದಿನ ಸುದ್ದಿ
Show comments