Webdunia - Bharat's app for daily news and videos

Install App

ಕೊನೆಗೂ 50,000 ರೂ. ವರೆಗಿನ ರೈತರ ಸಾಲಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 21 ಜೂನ್ 2017 (13:53 IST)
ಕೊನೆಗೂ ಸಿಎಂ ಸಿದ್ದರಾಮಯ್ಯ ಸಂಕಷ್ಟದಲ್ಲಿರುವ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ಸಹಕಾರಿ ಬ್ಯಾಂಕ್`ಗಳಲ್ಲಿನ 50,000 ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
 

ಜೂನ್ 20ರವರೆಗಿನ ಅಂದರೆ ನಿನ್ನೆವರೆಗೆ ರೈತರು ಮಾಡಿರುವ ಸಾಲವನ್ನ ಸರ್ಕಾರ ಮನ್ನಾ ಮಾಡಲಿದೆ. ಇದರಿಂದಾಗಿ 8165 ಕೋಟಿ ರೂ. ಹೊರೆಯಾಗಲಿದ್ದು, 22 ಲಕ್ಷಕ್ಕೂ ಅಧಿಕ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನಿರಂತರವಾಗಿ ಸಾಲಮನ್ನಾ ಮಾಡುವಂತೆ ಒತ್ತಾಯಿಸಿದ್ದರು. ವಿಧಾನಸಭೆ ಅಧಿವೇಶನದ ಕೊನೆಯ ದಿನ ಸಿಎಂ ತಮ್ಮ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಉತ್ತರಪ್ರದೇಶ, ಪಂಜಾಬ್ ಸೇರಿದಂತೆ ಹಲವೆಡೆ ಸಾಲಮನ್ನಾ ಮಾಡಿದ ಬಳಿಕ ಈ ಕುರಿತಂತೆ ಭಾರೀ ಚರ್ಚೆ ಶುರುವಾಗಿತ್ತು. ಈ ಬಗ್ಗೆ ಕಾಂಗ್ರೆಸ್ ಶಾಸಕರು ತೀವ್ರ ಒತ್ತಡ ಹೇರಿದ್ದರು. ಸ್ವತಃ ರಾಹುಲ್ ಗಾಂಧಿ ದೇಶದ ಎಲ್ಲ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments